Breaking News

ಆಂದೋಲನದ ವರದಿಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಸಿಎಂ!

Spread the love

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾವು ಮಂಡಿಸಿದ ೨೦೨೨ನೇ ಸಾಲಿನ ಬಜೆಟ್ ಕುರಿತು ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾದ ಕೃಷಿ ಅನುದಾನ ಕುರಿತು ಸವಿವರ ವರದಿಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

 

ಆಂದೋಲನ ಪತ್ರಿಕೆಯ ಎರಡನೇ ಪುಟದಲ್ಲಿ ‘ಕೃಷಿ ಕ್ಷೇತ್ರಕ್ಕೆ ೩೩,೭೦೦ ಕೋಟಿ ರೂ.’ ಶೀರ್ಷಿಕೆಯಡಿ ಕೃಷಿ ಅನುದಾನ ಕುರಿತು ವರದಿಗಳು ವಿವರಗಳೊಂದಿಗೆ ಪ್ರಕಟವಾಗಿತ್ತು. ಆ ವರದಿಯನ್ನು ಬಸವರಾಜ ಬೊಮ್ಮಾಯಿ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದಾರೆ. ಲಕ್ಷಾಂತರ ಫಾಲೋವರ್‌ಗಳು ಇರುವ ಸಿಎಂ ಫೇಸ್‌ಬುಕ್‌ನಲ್ಲಿ ಅನೇಕಾನೇಕ ಮಂದಿ ಈ ವರದಿಯನ್ನು ಓದಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ‘ಆಂದೋಲನ’ ದಿನಪತ್ರಿಕೆಯನ್ನು ಕುತೂಹಲದಿಂದ ವಲೋಕನ ಮಾಡಿದ್ದಾರೆ. ಆಂದೋಲನ’ ದಿನಪತ್ರಿಕೆಯಲ್ಲಿ ಮುಂಗಡ ಪತ್ರದ ವಿಶೇಷ ವರದಿ ಪುಟಗಳು ಮತ್ತು ವಿನ್ಯಾಸವನ್ನು ಕುರಿತು ಮೈಸೂರು ಭಾಗದಲ್ಲಿ ಓದುಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಪತ್ರಿಕೆಯಾಗಿ ಇದು ‘ಆಂದೋಲನ’ ಇಟ್ಟಿರುವ ವಿಶಿಷ್ಟ ಹೆಜ್ಜೆ ಎಂಬುದಾಗಿ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ