Breaking News

ಟವೆಲ್​ನಿಂದ ಕತ್ತು ಹಿಸುಕಿ ಸ್ನೇಹಿತನ ಹತ್ಯೆಗೈದು (Murder) ಬಣವೆಯಲ್ಲಿ ಸುಟ್ಟು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ಟವೆಲ್​ನಿಂದ ಕತ್ತು ಹಿಸುಕಿ ಸ್ನೇಹಿತನ ಹತ್ಯೆಗೈದು (Murder) ಬಣವೆಯಲ್ಲಿ ಸುಟ್ಟು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಜೊತೆ ಅನೈತಿಕ (Immoral Relationship) ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಸ್ನೇಹಿತ ಸಂತೋಷ ಫರೀಟ್​​ನನ್ನು ಪರಶುರಾಮ ಕುರುಬರ ಕೊಲೆ ಮಾಡಿದ್ದಾನೆ. ಸಂತೋಷ್ ಫರೀಟ್(36) ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ಚಂದಗಡ ನಿವಾಸಿ. ಆರೋಪಿ ಪರಶುರಾಮ ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ. ಕೊಲೆಯಾದ ಸಂತೋಷ್ ಪತ್ನಿ ಜೊತೆ ಪರಶುರಾಮ ಕುರಬರ ಅನೈತಿಕ ಸಂಬಂಧ ಹೊಂದಿದ್ದ. ಅಲ್ಲದೇ ಪರಶುರಾಮ ಸ್ನೇಹಿತನ ಪತ್ನಿಯನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದ.

ಮೃತ ಸಂತೋಷ್ ಮಾರ್ಚ್ 1 ರಂದು ಬೆಳಗಾವಿ ತಾಲೂಕಿನ ಕಣಬರಗಿಗೆ ಬಂದಿದ್ದ. ಈ ವೇಳೆ ಪುಸಲಾಯಿಸಿ ಸ್ನೇಹಿತನನ್ನು ಮದ್ಯ ಕುಡಿಯಲು ಕರೆದುಕೊಂಡು ಹೋಗಿದ್ದ. ಮಾಲಿನಿ ನಗರ ಬಳಿ ಗದ್ದೆಯೊಂದರಲ್ಲಿ ಮದ್ಯಪಾನ ಮಾಡಿಸಿ ಹತ್ಯೆ ಮಾಡಿದ್ದಾನೆ. ಟವೆಲ್​ನಿಂದ ಕತ್ತು ಹಿಸುಕಿ, ಭತ್ತದ ಬಣವೆಯಲ್ಲಿ ಶವವಿಟ್ಟುಬೆಂಕಿಹಚ್ಚಿದ್ದ ಪರಶುರಾಮ ಪರಾರಿಯಾಗಿದ್ದ. ಪರಶುರಾಮ, ಸಂತೋಷ ಬೈಕ್ನಲ್ಲಿ ತೆರಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಬೈಕ್ ಸಮೇತ ಆರೋಪಿಯನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ.

 


Spread the love

About Laxminews 24x7

Check Also

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

Spread the loveಬೆಂಗಳೂರು, ಸೆಪ್ಟೆಂಬರ್​ 03: ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ