Breaking News

ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ;H.D.K.

Spread the love

ಕಲಬುರಗಿ: ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ಬರುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗುತ್ತಿದೆ ಎಂದು ಕಲಬುರಗಿಯಲ್ಲಿ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನರಿಗೆ ರಾಷ್ಟ್ರೀಯ ಪಕ್ಷಗಳು ದ್ರೋಹ ಮಾಡುತ್ತಿವೆ. ರಾಜ್ಯದ ಜನರಿಗೆ ಸಿಎಂ ಬಸವರಾಜ ಬೊಮ್ಮಾಯಿ ದ್ರೋಹ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೇಕೆದಾಟು ವಿಚಾರವಾಗಿ ಮಾತನಾಡುವುದಾಗಿ ಹೇಳಿದ್ದಾರೆ. ಕೇಂದ್ರ ಜಲ ಶಕ್ತಿ ಸಚಿವರು ಹೇಳಿಕೆ ನೀಡಿದ್ದಾರೆ. 2 ರಾಜ್ಯ ಒಪ್ಪಿದರೆ ಮಾತುಕತೆ ನಡೆಸುವುದಾಗಿ ಹೇಳುತ್ತಾರೆ. 2 ರಾಷ್ಟ್ರೀಯ ಪಕ್ಷಗಳಿಗೆ ಯೋಜನೆ ಮಾಡುವ ಯೋಗ್ಯತೆ ಇಲ್ಲ. ಇವರಿಗೆ ಮೇಕೆದಾಟು ಯೋಜನೆ ಮಾಡುವ ಯೋಗ್ಯತೆ ಇಲ್ಲ ಎಂದು ಕಲಬುರಗಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಟೀಕಿಸಿದ್ದಾರೆ.


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ