Breaking News

ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ನಿರೂಪಕ ಅರುಣ್ ಬಡಿಗೇರ್ ವಿರುದ್ಧ ದೂರು

Spread the love

ಮಂಗಳೂರು, ಮಾ.7: ಖಾಸಗಿ ಟಿವಿ ವಾಹಿನಿ ‘ಪಬ್ಲಿಕ್ ಟಿವಿ ನ್ಯೂಸ್ ಚಾನೆಲ್ ನ ಚರ್ಚಾ ಕಾರ್ಯಕ್ರಮವೊಂದರಲ್ಲಿ ಅದರ ನಿರೂಪಕ ಅರುಣ್ ಬಡಿಗೇರ್ ಎಂಬಾತ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ

ಮುಲ್ಕಿ ಕಾರ್ನಾಡು ಗ್ರಾಮದ ಕೆ.ಎಸ್.

ರಾವ್ ನಗರ ನಿವಾಸಿ ಎಸ್.ಅಬ್ದುಲ್ ಖಾದರ್ ಎಂಬವರು ಈ ದೂರು ನೀಡಿದ್ದಾರೆ.

ಪಬ್ಲಿಕ್ ಟಿವಿ ನ್ಯೂಸ್ ಚಾನೆಲ್ ನಲ್ಲಿ ಫೆ.22ರಂದು ರಾತ್ರಿ 7:30ಕ್ಕೆ ಪ್ರಸಾರವಾದ ಚರ್ಚಾಕೂಟದಲ್ಲಿ ನಿರೂಪಕರಾಗಿದ್ದ ಅರುಣ್ ಬಡಿಗೇರ್ ಮುಸ್ಲಿಮ್ ಸಮುದಾಯವನ್ನು ಅವಮಾನಿಸಿ ಮಾತನಾಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ