Breaking News

ಫಲಿತಾಂಶ:ಗೋವಾ,ಉತ್ತರಾಖಂಡಕ್ಕೆ ರಾಜ್ಯ ಕಾಂಗ್ರೆಸ್ ಬಾಹುಬಲಿಗಳು

Spread the love

ಬೆಂಗಳೂರು: ಗೋವಾ ಹಾಗೂ ಉತ್ತರಾಖಂಡ್ ದಲ್ಲಿ ಕಾಂಗ್ರೆಸ್ ಗೆಲುವಿನ ಸನಿಹ ಬಂದಿದೆ ಎಂದು ಎಕ್ಸಿಟ್ ಫೋಲ್ ಗಳಲ್ಲಿ ಬಂದ ಅಭಿಪ್ರಾಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಪ್ರಮುಖ ನಾಯಕರನ್ನು ಈ ಎರಡು ರಾಜ್ಯದಲ್ಲಿ ಸರಕಾರ ರಚಿಸುವ ಕಸರತ್ತಿಗೆ ನಿಯೋಜಿಸಿದೆ.

ಈ ಎರಡೂ ರಾಜ್ಯಗಳಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ “ಆಪರೇಷನ್ ಕಮಲ” ಕಾರ್ಯಾಚರಣೆ ನಡೆಯಬಹುದೆಂದು ಕಾಂಗ್ರೆಸ್ ಊಹಿಸಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ತಂತ್ರಗಾರಿಕೆ ಆರಂಭಿಸಿದೆ.

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಮಹಾರಾಷ್ಟ್ರದ ಸಚಿವರೊಬ್ಬರನ್ನು ಶಾಸಕರನ್ನು ಕಾಯುವುದಕ್ಕೆ ನಿಯೋಜನೆ ಮಾಡಲಾಗಿದೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ