ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಕೇಸರಿ ಪಡೆ ಅಧಿಕಾರದ ಗಾದಿ ಮರಳಿ ಹಿಡಿಯಲು ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕ್ಷಣ ಕ್ಷಣಕ್ಕೂ ಲೆಕ್ಕಾಚಾರಗಳನ್ನು ಹಾಕುತ್ತಿದೆ.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ನಮಗೆ ಸಂಖ್ಯಾ ಬಲದ ಕೊರತೆಯಾದರೆ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (ಎಂಜಿಪಿ) ಬೆಂಬಲ ಪಡೆಯಲು ಕೇಂದ್ರ ಬಿಜೆಪಿ ನಾಯಕತ್ವ ಈಗಾಗಲೇ ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಪಿಟಿಐ ಜೊತೆ ಮಾತನಾಡಿದ ಸಾವಂತ್, ಬಿಜೆಪಿಯು 22 ಕ್ಕೂ ಹೆಚ್ಚು ಸ್ಥಾನಗಳನ್ನು (ಬಹುಮತಕ್ಕೆ 21 ) ಪಡೆಯುವ ಆಶಾವಾದ ಹೊಂದಿದೆ, ಆದರೆ ಸಂಖ್ಯಾಬಲದ ಕೊರತೆಯಾದರೆ, ಸ್ವತಂತ್ರರು ಮತ್ತು ಎಂಜಿಪಿ ಬೆಂಬಲವನ್ನು ಪಡೆಯುವ ಆಯ್ಕೆಯನ್ನು ಸಹ ಮುಕ್ತವಾಗಿ ಇರಿಸಿದೆ ಎಂದು ಹೇಳಿದ್ದಾರೆ.
Laxmi News 24×7