Breaking News

ಗೋವಾದಲ್ಲಿ ಮತ್ತೆ ಕುದುರೆ ವ್ಯಾಪಾರ? ಗದ್ದುಗೆ ಉಳಿಸಿಕೊಳ್ಳಲು ಬಿಜೆಪಿ ರಣತಂತ್ರ

Spread the love

ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಕೇಸರಿ ಪಡೆ ಅಧಿಕಾರದ ಗಾದಿ ಮರಳಿ ಹಿಡಿಯಲು ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕ್ಷಣ ಕ್ಷಣಕ್ಕೂ ಲೆಕ್ಕಾಚಾರಗಳನ್ನು ಹಾಕುತ್ತಿದೆ.

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ನಮಗೆ ಸಂಖ್ಯಾ ಬಲದ ಕೊರತೆಯಾದರೆ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (ಎಂಜಿಪಿ) ಬೆಂಬಲ ಪಡೆಯಲು ಕೇಂದ್ರ ಬಿಜೆಪಿ ನಾಯಕತ್ವ ಈಗಾಗಲೇ ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಸಾವಂತ್, ಬಿಜೆಪಿಯು 22 ಕ್ಕೂ ಹೆಚ್ಚು ಸ್ಥಾನಗಳನ್ನು (ಬಹುಮತಕ್ಕೆ 21 ) ಪಡೆಯುವ ಆಶಾವಾದ ಹೊಂದಿದೆ, ಆದರೆ ಸಂಖ್ಯಾಬಲದ ಕೊರತೆಯಾದರೆ, ಸ್ವತಂತ್ರರು ಮತ್ತು ಎಂಜಿಪಿ ಬೆಂಬಲವನ್ನು ಪಡೆಯುವ ಆಯ್ಕೆಯನ್ನು ಸಹ ಮುಕ್ತವಾಗಿ ಇರಿಸಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ