Breaking News

ಲಂವವನ್ನು ಪೇಟಿಯಮ್ ಮಾಡಿಸಿಕೊಂಡ ಇಬ್ಬರು ಎಸಿಬಿ ಬಲೆಗೆ

Spread the love

ಬೆಳಗಾವಿ: ಈಗ ಏನಿದ್ದರೂ ಡಿಜಿಟಲ್ ಪರ್ವ ಹೀಗಾಗಿ ಈಗ ಕ್ಯಾಶ್ ಲೆಸ್ ರೋಗ  ಬ್ರಷ್ಟಾಚಾರದ ಕ್ಷೇತ್ರಕ್ಕೂ ಹರಡಿದ್ದು ,ಲಂವವನ್ನು ಪೇಟಿಯಮ್ ಮಾಡಿಸಿಕೊಂಡ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಈ ಘಟನೆ ನಡೆದಿದ್ದು ಬೆಳಗಾವಿ ಜಿಲ್ಲೆಯಲ್ಲಿ ಅನ್ನೋದು ವಿಶೇಷ

ಪಿತ್ರಾರ್ಜಿತ ಆಸ್ತಿ ಪರಭಾರೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ನೀಡಲು ರೂ.4,000 ಲಂಚ ಕೇಳಿದ ಸವದತ್ತಿ ತಾಲೂಕು ಮುರಗೋಡದ ಸಬ್ ರಿಜಿಸ್ಟ್ರಾರ್ ಮತ್ತು ಸಬ್ ರಿಜಿಸ್ಟ್ರಾರ್ ಪರವಾಗಿ ಲಂಚವನ್ನು ಸ್ವೀಕರಿಸಿದ ಬಾಂಡ್ ರೈಟರ್ ಬುಧವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಆರೋಪಿಗಳಾದ ಸಬ್ ರಿಜಿಸ್ಟ್ರಾರ್ ಸಂಜೀವ ವೀರಭದ್ರ ಕಪಾಲಿ ಹಾಗೂ ಸ್ಥಳೀಯ ಬಾಂಡ್ ರೈಟರ್ ಶಿವಯೋಗಿ ಶಂಕರಯ್ಯ ಮಲ್ಲಯ್ಯನವರ ಇಬ್ಬರನ್ನೂ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೊದಲ ಆರೋಪಿ ಸಂಜೀವ ಕಪಲಿ ದಾಖಲೆ ಪತ್ರಗಳನ್ನು ನೀಡಲು ವಿನಾಕಾರಣ ವಿಳಂಬ ಧೋರಣೆ ತೋರುವುದಲ್ಲದೆ, ಕೇಳಿದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಶಿವಪ್ಪ ವರಗಣ್ಣವರ ಎಂಬವರು ಎಸಿಬಿಗೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಲಂಚ ಪಡೆಯುವ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಹಿಡಿದು ಬಂಧಿಸಿದ್ದಾರೆ. ಎಸಿಬಿ (ಉತ್ತರ ವಲಯ) ಎಸ್ಪಿ ಬಿ.ಎಸ್.ನೇಮಗೌಡ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್ಪಿ ಕರುಣಾಕರಶೆಟ್ಟಿ ಮತ್ತು ಇನಸ್ಪೆಕ್ಟರ್ ಎ.ಎಸ್.ಗುದಿಗೊಪ್ಪ ಇವರ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಯಿತು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ