ಬೆಂಗಳೂರು: ಉತ್ತರ ಪ್ರದೇಶದಲ್ಲಿ ಜನ ಬಿಜೆಪಿ ಗೆಲ್ಲಿಸಲು ಮುಖ್ಯ ಕಾರಣ ಅಲ್ಲಿ ಬಿಜೆಪಿ ಮಾಡುತ್ತಾ ಬಂದ ಕೋಮು ಆಧಾರದ ಧ್ರುವೀಕರಣ ಎಂದು ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ವಿಶ್ಲೇಷಣೆ ಮಾಡುತ್ತಾ ಅವರು ಈ ಅಭಿಪ್ರಾಯಪಟ್ಟಿದ್ದಾರೆ.
ಚುನಾವಣೆಗಳ ಫಲಿತಾಂಶ ಎನ್ನುವುದು ಜನತೆಯ ಅಭಿಪ್ರಾಯವನ್ನು ಅರಿತುಕೊಳ್ಳಲು ಇರುವ ಅವಕಾಶ. ಅದನ್ನು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರೆಲ್ಲರೂ ಗೌರವಿಸಬೇಕು. ನಾನು ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸುತ್ತೇನೆ. ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ, ಈ ಹಿನ್ನಡೆಯ ಬಗ್ಗೆ ನಮ್ಮ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ.ಬಿಜೆಪಿಯ ಕೋಮುವಾದದ ರಾಜಕಾರಣ ಉತ್ತರಪ್ರದೇಶದಲ್ಲಿ ಯಶಸ್ವಿಯಾಗಿದೆ ಎನ್ನುವುದು ಈ ಫಲಿತಾಂಶದಲ್ಲಿ ಸ್ಪಷ್ಟವಾಗುತ್ತಿದೆ.ಇದು ಬಹಳ ಕಳವಳಕಾರಿ ಬೆಳವಣಿಗೆ” ಎಂದು ಅವರು ಹೇಳಿದರು.