ಬೆಂಗಳೂರು : ರಾಜ್ಯ ಸರ್ಕಾರ ನೀಡಿರುವ ಮಾತಿನಂತೆ ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿಯೇ ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸಬೇಕು ಎಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.
ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಭರವಸೆ ನೀಡಿ ಮಾರ್ಚ್ 15ಕ್ಕೆ ಒಂದು ವರ್ಷವಾಗುತ್ತಿದೆ. ಆದರೂ ಸರ್ಕಾರ ಭರವಸೆ ಈಡೇರಿಸಿಲ್ಲ. ಆದ್ದರಿಂದ ಪ್ರಸಕ್ತ ಬಜೆಟ್ ಅಧಿವೇಶನದಲ್ಲಿಯೇ ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ಬೇಡಿಕೆ ಈಡೇರಿಸುವ ಸಂಬಂಧ ರಾಜ್ಯ ಸರ್ಕಾರ ತಮ್ಮ ಗಡುವು ಅವಧಿಯನ್ನು ಮುಂದುವರಿಸುತ್ತಲೇ ಇದೆ. ಈ ಹಿಂದೆ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ 2021ರ ಸೆಪ್ಟೆಂಬರ್ 15ರೊಳಗೆ ಬೇಡಿಕೆ ಈಡೇರಿಸುವ ಬಗ್ಗೆ ಸದನದಲ್ಲಿಯೇ ಭರವಸೆ ನೀಡಿದ್ದರು.
Laxmi News 24×7