Breaking News

ಸಕಲ ಗೌರವಗಳೊಂದಿಗೆ 18 ತಿಂಗಳ ಹಿಂದೆಯಷ್ಟೆ ಸೇನೆ ಸೇರಿದ್ದ ಯೋಧನ ಅಂತ್ಯಕ್ರಿಯೆ

Spread the love

ಚಿಕ್ಕೋಡಿ(ಬೆಳಗಾವಿ): ಕಳೆದ ಮೂರು ದಿನದ ಹಿಂದೆ ದೆಹಲಿಯಲ್ಲಿ ಸಾವನ್ನಪ್ಪಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಯೋಧ ಅನೀಲ್ ಶಿವಾಜಿ ಶಿಂಗಾಯಿ(23) ಅವರ ಅಂತ್ಯಕ್ರಿಯೆ ಸಕಲ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಿತು.

ಕಳೆದ 18 ತಿಂಗಳ ಹಿಂದೆಯಷ್ಟೆ ಸೈನಿಕ ಸೇವೆಗೆ ಸೇರಿದ್ದರು. ದೆಹಲಿಯಲ್ಲಿನ ರಾಜಪುಟಾನ ರಿಫಾಯಿಲ್ ದಲ್ಲಿ ತರಬೇತಿ ಮುಗಿಸಿದ್ದರು. ನಂತರ ಕಳೆದ ಮಾರ್ಚ್‍ನಲ್ಲಿ ಕರೋಶಿ ಗ್ರಾಮಕ್ಕೆ ಆಗಮಿಸಿದ್ದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮತ್ತೆ ದೇಶ ಸೇವೆ ಮಾಡಲು ಹೋಗಿರುವಾಗ ಇವರು ಮೃತಪಟ್ಟಿದ್ದಾರೆ. ಯೋಧನ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಸಾವಿನ ಬಗ್ಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ತಹಶೀಲ್ದಾರ್ ಅವರು ತಿಳಿಸಿದ್ದಾರೆ

ಕಡು ಬಡತನದಲ್ಲೇ ಹುಟ್ಟಿ ಬೆಳೆದ ಅನೀಲ್ ಹುಟ್ಟೂರಿನಲ್ಲಿಯೇ ತನ್ನ ಪ್ರಾಥಮಿಕ ಶಿಕ್ಷಣ ಪಡೆದುಕೊಂಡು ದೇಶ ಸೇವೆಗೆ ಸೈನಿಕನಾಗಿ ಸೇರಿಕೊಂಡಿದ್ದರು. ಯೋಧನ ಕಳೆದುಕೊಂಡ ಕುಟಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ನೀರವ ಮೌನ ಆವರಿಸಿದೆ. ಗ್ರಾಮದ ಜನರು ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.


Spread the love

About Laxminews 24x7

Check Also

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

Spread the loveಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ