Breaking News

ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ವಿಶೇಷ ಸ್ಥಾನ ಪಡೆದ ಶೋಭಾ, ಪ್ರಲ್ಹಾದ್ ಜೋಶಿ

Spread the love

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕರಲ್ಲಿ ಗೆದ್ದಿದೆ. ಗೋವಾದಲ್ಲಿ ಇತರರ ಬೆಂಬಲದೊಂದಿಗೆ ಬಿಜೆಪಿ ಸರಕಾರ ರಚಿಸಲಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸಿಕ್ಕ ಗೆಲುವು, ರಾಷ್ಟ್ರ ರಾಜಕಾರಣದ ಮುಂದಿನ ರಾಜಕಾರಣಕ್ಕೆ ಬಿಜೆಪಿಗೆ ಬಲವನ್ನು ನೀಡಿದೆ.

ಈ ಗೆಲುವಿನಲ್ಲಿ ಕರ್ನಾಟಕದ ಇಬ್ಬರು ಸಂಸದರ ಪಾಲು ಬಹಳ ಮಹತ್ವವಾದದ್ದು.

ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಉತ್ತರ ಪ್ರದೇಶದ ಮತ್ತು ಹುಬ್ಬಳ್ಳಿ-ಧಾರವಾಡ ಸಂಸದ ಪ್ರಲ್ಹಾದ್ ಜೋಶಿಯವರಿಗೆ ಉತ್ತರಾಖಂಡ್ ಜವಾಬ್ದಾರಿಯನ್ನು ನೀಡಲಾಗಿತ್ತು.

ಶೋಭಾಗೆ ಉತ್ತರ ಪ್ರದೇಶದ ಅವಧ್ ಪ್ರದೇಶದ ಉಸ್ತುವಾರಿಯನ್ನು ನೀಡಲಾಗಿದ್ದರೆ, ಜೋಶಿಗೆ ಸಂಪೂರ್ಣ ಉತ್ತರಾಖಾಂಡ್ ಜವಾಬ್ದಾರಿಯನ್ನು ನೀಡಲಾಗಿತ್ತು. ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ಇವರಿಬ್ಬರೂ ಹೈಕಮಾಂಡಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ