Breaking News

ಗೂಂಡಾಗಿರಿ ಮಾಡಲು ಡಿಕೆಶಿ ಗೋವಾ ಹೋಗಿದ್ರಾ: ಪ್ರಹ್ಲಾದ್ ಜೋಶಿ ವ್ಯಂಗ್ಯ

Spread the love

ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಯಾಕೆ ಗೋವಾಕ್ಕೆ ಹೋಗಿದ್ದರೂ ಎನ್ನುವುದು ಇನ್ನೂ ಅರ್ಥವಾಗಿಲ್ಲ, ತೋಳಬಳ ತೋರಿಸಲು, ಗೂಂಡಾಗಿರಿ ಮಾಡಲು ಹೋಗಿದ್ರಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದ್ರು ಎಂಬಂತೆ ಕಾಂಗ್ರೆಸ್ ನಡೆಯಾಗಿದೆ. ಫಲಿತಾಂಶ ಬರುವ ಮುನ್ನವೇ ಗೋವಾಕ್ಕೆ ಹೋಗಿ ಗೂಂಡಾಗಿರಿ ಮಾಡಲು ತಯಾರಿ ಮಾಡಿದ್ದರು ಎಂದು ಟೀಕಿಸಿದರು.

ಸ್ವಾತಂತ್ರ್ಯ ನಂತರದ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧಿ ಹೇಳಿದ್ದರು. ಅದನ್ನು ರಾಹುಲ್ ಗಾಂಧಿ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಇದು ಖುಷಿಯ ವಿಚಾರವಾಗಿದೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ