ಅರುಣ್ ಶಹಾಪುರ ವಿರುದ್ಧ ಅಸಮಾಧಾನ ಸ್ಪೋಟ…! ಬಂಡಾಯ ಅಭ್ಯರ್ಥಿಯಾಗಿ ಕೋರೆ ಪುತ್ರಿ ಕಣಕ್ಕೆ!?

Spread the love

ಬೆಳಗಾವಿ: ಜಿಲ್ಲೆಯವರಿಗೆ ಬಿಜೆಪಿ ಟಿಕೆಟ್ ನೀಡದಿರುವುದ್ದಕ್ಕೆ ಆಕ್ರೋಶ ಭುಗಿಲೆದ್ದಿದ್ದು, ಈ ನಡುವೆ ಹಾಲಿ ಎಂಎಲ್‍ಸಿ ಅರುಣ್ ಶಹಾಪುರ್‌ಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನ ಸ್ಫೋಟಗೊಂಡಿದೆ. ಬೆಳಗಾವಿಯಲ್ಲಿ ಸಭೆ ಸೇರಿದ ಎರಡು ಸಾವಿರಕ್ಕೂ ಹೆಚ್ಚು ಶಿಕ್ಷಕರು, ಬೆಳಗಾವಿ ಜಿಲ್ಲೆಯವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟದಿಂದ ನಡೆದ ಸಭೆಯಲ್ಲಿ ಬೆಳಗಾವಿ ಜಿಲ್ಲೆಯವರಿಗೇ ಟಿಕೆಟ್ ನೀಡುವಂತೆ ಆಗ್ರಹ ವ್ಯಕ್ತವಾಯಿತು. ಈಗಾಗಲೇ ಘೋಷಣೆ ಮಾಡಿದ ಟಿಕೆಟ್ ವಾಪಸ್ ಪಡೆದು ಬೆಳಗಾವಿ ಜಿಲ್ಲೆಯವರಿಗೆ ಟಿಕೆಟ್ ಕೊಟ್ಟರೆ ಸ್ವಾಗತ. ಇಲ್ಲವಾದ್ರೆ ಬೆಳಗಾವಿ ಜಿಲ್ಲೆಯ ಎಲ್ಲ ಶಿಕ್ಷಕರು ಸೇರಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಂಡಾಯ ಅಭ್ಯರ್ಥಿಯಾಗಿ ಕೋರೆ ಪುತ್ರಿ ಕಣಕ್ಕೆ!
ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಪ್ರಭಾಕರ್ ಕೋರೆ ಪುತ್ರಿ ಕಣಕ್ಕಿಳಿಯುವ ಕುರಿತಾದ ಚರ್ಚೆಗಳು ಗರಿಗೆದರಿವೆ. ಕೆಎಲ್‍ಇ ಕಾರ್ಯಾಧ್ಯಕ್ಷರಾಗಿರುವ ಡಾ.ಪ್ರಭಾಕರ್ ಕೋರೆ, ರಾಜ್ಯಸಭಾ ಮಾಜಿ ಸದಸ್ಯರು ಹೌದು. ಕೆಎಲ್‍ಇ ದಂತ ವಿಜ್ಞಾನ ಮಹಾವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿರುವ ಪ್ರಭಾಕರ್ ಕೋರೆ ಪುತ್ರಿ ಡಾ.ಪ್ರೀತಿ ಕೋರೆ ಅವರು, ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆದಿವೆ. ಪ್ರಸ್ತುತ ಐವರು ಆಕಾಂಕ್ಷಿಗಳ ಪಟ್ಟಿಯಲ್ಲಿ ಡಾ.ಪ್ರೀತಿ ಕೋರೆ ಹೆಸರಿಲ್ಲ.


Spread the love

About Laxminews 24x7

Check Also

Bigg Boss ಸೀಸನ್​-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು

Spread the love ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ