Breaking News

ಯುವಕನ ರುಂಡ ಕಡಿದು ಭೀಕರ ಹತ್ಯೆ………………!

Spread the love

ಕಲಬುರಗಿ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದುದ್ದು, ಯುವಕನ ರುಂಡ ಕತ್ತರಿಸಿ ಭೀಕರವಾಗಿ ಕೊಲೆ ಮಾಡಲಾಗಿದೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ಯುವಕನ ಹತ್ಯೆ ಮಾಡಲಾಗಿದ್ದು, ಬಾಬು ಮಲ್ಲೇಶಪ್ಪ ಕೋಬಾಳ್(32) ಹತ್ಯೆಯಾದ ಯುವಕ. ಅದೇ ಗ್ರಾಮದ ಪ್ರಭು ಕಾಂಬಳೆ ಎಂಬಾತನಿಂದ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೈಕ್ ಮೇಲೆ ಕುಳಿತಿದ್ದಾಗ ಪ್ರಭು ಕಾಂಬಳೆ ಕೊಡಲಿಯಿಂದ ಬಾಬು ಕೋಬಾಳನ ರುಂಡ ಕಡಿದಿದ್ದಾನೆ ಎಂದು ಆರೋಪಿಸಲಾಗಿದೆ.

ಸುಮಾರು 9 ವರ್ಷಗಳ ಹಿಂದೆ ನಡೆದಿದ್ದ ಕೊಲೆಗೆ ಪ್ರತಿಕಾರ ತೀರಿಸಿಕೊಳ್ಳಲು ಬಾಬು ಕೋಬಾಳನ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ದೇವಲಗಾಣಗಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಭು ಕಾಂಬಳೆಗಾಗಿ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ