ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದ “ದಿ ಕಾಶ್ಮೀರ್ ಫೈಲ್ಸ್” ಸಿನಿಮಾ ಭಾರೀ ಚರ್ಚೆಗೆ ಕಾರಣವಾಗಿದೆ. ರಾಜಕೀಯ ಕೆಸರಾಟಕ್ಕೂ ಕಾರಣವಾಗಿದೆ. ಕಾಶ್ಮೀರದಲ್ಲಿ ನಿಜವಾಗಿಯೂ ನಡೆದದ್ದೇ ಬೇರೆ, ಸಿನಿಮಾದಲ್ಲಿ ತೋರಿಸಿದ್ದೆ ಬೇರೆ ಎನ್ನುವ ಮಾತಿನ ಮಧ್ಯ, ನಡೆದ ಘಟನೆಯನ್ನೇ ನಿರ್ದೇಶಕರು ಸಿನಿಮಾದಲ್ಲಿ ತೋರಿಸಿದ್ದಾರೆ ಎಂದು ಹಲವು ಕ್ಷೇತ್ರಗಳ ಗಣ್ಯರು ಸಿನಿಮಾ ತಂಡದ ಬೆನ್ನಿಗೆ ನಿಂತಿದ್ದಾರೆ. ಈ ಮಧ್ಯೆ ನಟಿ ಯಾಮಿ ಗೌತಮ್ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.
ನೆನ್ನೆಯಷ್ಟೇ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್, ಬಾಲಿವುಡ್ ಕಲಾವಿದರಿಗೆ ಮಾತಿನ ಚಾಟಿ ಬೀಸಿದ್ದರು. ಬಾಲಿವುಡ್ ಏಕೆ ಮೌನವಾಗಿದೆ ಎಂದು ಪ್ರಶ್ನೆ ಮಾಡಿದ್ದರು. ಈ ಮಾತಿನ ಬೆನ್ನಲ್ಲೆ ಹೆಸರಾಂತ ನಟಿ ಯಾಮಿ ಗೌತಮ್ ಟ್ವೀಟ್ ಮಾಡಿದ್ದಾರೆ. ನಾನು ಕಾಶ್ಮೀರಿ ಪಂಡಿತನನ್ನು ಮದುವೆಯಾಗಿದ್ದೇನೆ. ಪಂಡಿತರ ನೋವನ್ನು ಹತ್ತಿರದಿಂದ ಕಂಡಿದ್ದೇನೆ. ಸತ್ಯ ಹೇಳುವುದಕ್ಕೆ 32 ವರ್ಷ ಬೇಕಾಯಿತು. ಆ ಸಿನಿಮಾದಲ್ಲಿ ಇರುವುದೆಲ್ಲ ಸತ್ಯ. ಆ ನರಮೇಧದ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಇರಲಿಲ್ಲ. ಈ ಸಿನಿಮಾದ ಮೂಲಕ ನಿರ್ದೇಶಕರು ಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.