Breaking News
Home / ರಾಜಕೀಯ / ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: C.M.

ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: C.M.

Spread the love

ಬೆಂಗಳೂರು: ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಹೈ ಕೋಟ್ ಹಿಜಬ್ ತೀರ್ಪು ನೀಡಿದ ಹಿನ್ನೆಲೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ತ್ರೀ ಸದಸ್ಯ ಪೀಠ ನೀಡಿರುವ ತೀರ್ಪನ್ನು ಎಲ್ಲರೂ ಸಹ ಪಾಲಿಸಬೇಕು. ಇದನ್ನು ಅನುಷ್ಠಾನಗೊಳಿಸುವ ಸಮಯದಲ್ಲಿ ಎಲ್ಲರೂ ಸಹಕರಿಸಿ ಶಾಂತಿಯನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ. ಹಾಗಾಗಿ ನಾನು ಎಲ್ಲ ಜನರಿಗೂ, ಸಮುದಾಯ ನಾಯಕರಿಗೂ, ಪಾಲಕರಿಗೂ, ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳು ಈ ತೀರ್ಪನ್ನು ಒಪ್ಪಿಕೊಂಡು ಶಾಂತಿ ಸುವ್ಯಸ್ಥೆಯನ್ನು ಕಾಪಾಡಬೇಕು ಎಂದು ನಾನು ಎಲ್ಲರಲ್ಲಿಯೂ ಕಳಕಳಿಯಿಂದ ವಿನಂತಿಸುತ್ತೇನೆ.

ಎಲ್ಲ ವಿದ್ಯಾರ್ಥಿಗಳು ಹೈ ಕೋರ್ಟ್ ತೀರ್ಪನ್ನು ಪಾಲಿಸಿ. ನಿಮ್ಮ ಶಿಕ್ಷಣ ನಿಮಗೆ ಬಹಳ ಮುಖ್ಯ. ಪರೀಕ್ಷೆಗೆ ಹಾಜರಾಗದೇ ಇರುವುದನ್ನು ಬಿಟ್ಟು. ಎಲ್ಲ ವಿದ್ಯಾರ್ಥಿಗಳು ತರಗತಿಗೆ, ಪರೀಕ್ಷೆಗೆ ಆಗಮಿಸಿ. ಒಂದು ವೇಳೆ ಹೈಕೋರ್ಟ್ ತೀರ್ಪನ್ನು ನಿರಾಕರಿಸಿ ಕಾನೂನು ಸುವ್ಯಸ್ಥೆಯನ್ನು ಕೈಗೆತ್ತಿಕೊಂಡರೆ ನಮ್ಮ ಗೃಹ ಇಲಾಖೆ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ