Breaking News

ಪಿಡಿಒ ಕಿರುಕುಳ ಪತ್ನಿ ಆತ್ಮ ಹತ್ಯೆ, ತಂದೆಯ ದೂರಿನ ಮೇಲೆ ಪಿಡಿಒ ಅರೆಸ್ಟ್

Spread the love

ಕೊಳ್ಳೇಗಾಲ: ಹನೂರು ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿಯ ಅಭಿವೃದ್ಧಿಅಧಿಕಾರಿ (ಪಿಡಿಒ) ಆನಂದ ಶ್ಯಾಮ ಕಾಂಬ್ಳೆ ಅವರ ಪತ್ನಿ ವಿದ್ಯಾಶ್ರೀ ಎಂಬುವವರ ಮೃತದೇಹವು ದಂಪತಿ ವಾಸವಿದ್ದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಂಗಳವಾರ ಕಂಡು ಬಂದಿದೆ.

 

‘ಆನಂದ ಅವರು ಮಗಳನ್ನು ಕೊಲೆ ಮಾಡಿ ನಂತರ ನೇಣು ಹಾಕಿದ್ದಾರೆ’ ಎಂದು ವಿದ್ಯಾಶ್ರೀ ತಂದೆ ಚಿದಾನಂದ ವಿಠಲ ಕಾಂಬ್ಳೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು ಪಿಡಿಒ ಆನಂದ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆನಂದ ಶ್ಯಾಮ ಕಾಂಬ್ಳೆ ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದವರು. ಇವರ ಪತ್ನಿ ವಿದ್ಯಾಶ್ರೀ (23) ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಬಾಳ ಗ್ರಾಮದವರು. ನಗರದ ಬಸ್ತೀಪುರ ಬಡಾವಣೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. 2019ರಲ್ಲಿ ಮದುವೆಯಾಗಿದ್ದ ಈ ದಂಪತಿಗೆ ಒಂಬತ್ತು ತಿಂಗಳ ಹೆಣ್ಣು ಮಗು ಇದೆ.

ವರದಕ್ಷಿಣೆ ಕಿರುಕುಳ, ಶೀಲದ ಬಗ್ಗೆ ಶಂಕೆ: ಆನಂದ ಶ್ಯಾಮ ಕಾಂಬ್ಳೆ ಅವರು ಮದ್ಯಪಾನ ಮಾಡಿ ವಿದ್ಯಶ್ರೀ ಅವರೊಂದಿಗೆ ಜಗಳವಾಡುತ್ತಿದ್ದರು. ತವರು ಮನೆಯಿಂದ ವರದಕ್ಷಿಣೆ ತರುವಂತೆಯೂ ಪೀಡಿಸುತ್ತಿದ್ದರು. ವಿದ್ಯಾಶ್ರೀ ಅವರ ಶೀಲದ ಬಗ್ಗೆ ಶಂಕೆಯನ್ನೂ ವ್ಯಕ್ತಪಡಿಸುತ್ತಿದ್ದರು ಎನ್ನಲಾಗಿದೆ.

‘ಮಂಗಳವಾರ ಮುಂಜಾವು 3 ಗಂಟೆ ಸುಮಾರಿಗೆ ಆನಂದ ಅವರು ವಿದ್ಯಾಶ್ರೀ ತಂದೆ ಚಿದಾನಂದ ಅವರಿಗೆ ಕರೆ ಮಾಡಿ, ‘ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶವವನ್ನು ಗ್ರಾಮಕ್ಕೆ ತರುತ್ತೇನೆ’ ಎಂದು ಹೇಳಿದ್ದರು. ಆಗ ತಂದೆ ಬೇಡ, ತಾವೇ ಅಲ್ಲಿಗೆ ಬರುವುದಾಗಿ ಹೇಳಿ ಊರಿನಿಂದ ಹೊರಟಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ