Breaking News

ಹೋಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ‌ʼಬಂಪರ್ʼ ಸುದ್ದಿ.!

Spread the love

ಹೋಳಿ ಹಬ್ಬಕ್ಕೂ ಮೊದಲೇ ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ಸಿಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ, 7ನೇ ವೇತನ ಆಯೋಗದ ಅಡಿಯಲ್ಲಿ ಉದ್ಯೋಗಿಗಳ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ಘೋಷಣೆ ಮಾಡಬಹುದು. ಇಂದು ನಡೆಯಲಿರುವ ಕೇಂದ್ರ ಸಂಪುಟ ಸಭೆಯಲ್ಲಿ ಇದನ್ನು ಪ್ರಕಟಿಸುವ ನಿರೀಕ್ಷೆಯಿದೆ.

 

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಡಿಯರ್ನೆಸ್‌ ರಿಲೀಫ್‌ ಹೆಚ್ಚಳ ಮಾಡುವ ಕುರಿತ ಚರ್ಚೆಯನ್ನು ಅನುಮೋದಿಸಬಹುದು. ಸರ್ಕಾರ ತುಟ್ಟಿಭತ್ಯೆಯನ್ನು ಶೇ.3 ರಷ್ಟು ಹೆಚ್ಚಿಸಬಹುದು ಎಂದು ನಿರೀಕ್ಷಿಸಲಾಗಿದೆ.

ಪ್ರಸ್ತುತ ತುಟ್ಟಿಭತ್ಯೆ ಶೇ.31 ರಷ್ಟಿದೆ. ಶೇ.3 ರಷ್ಟು ಏರಿಕೆಯಾದ ನಂತರ ಡಿಎ ಶೇ.34 ಕ್ಕೆ ತಲುಪಲಿದೆ. ಸರ್ಕಾರ ಈ ನಿರ್ಧಾರ ಕೈಗೊಂಡರೆ 50 ಲಕ್ಷಕ್ಕೂ ಹೆಚ್ಚು ಕೇಂದ್ರ ನೌಕರರು ಮತ್ತು 65 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಡಿಎ ಹೆಚ್ಚಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡರೆ, 2022 ರ ಜನವರಿ 1ರಿಂದ್ಲೇ ಅನ್ವಯವಾಗಲಿದೆ. ಹೆಚ್ಚಿದ ವೇತನ ಮತ್ತು ಬಾಕಿ ಹಣ ಅತಿ ಶೀಘ್ರದಲ್ಲಿ ಉದ್ಯೋಗಿಗಳ ಖಾತೆಗೆ ಜಮಾ ಆಗಲಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ