ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ್ ಉಪ್ಪಾರ್ ಅವರ ನೇತೃತ್ವ ಹಾಗೂ ಬೈಲಹೊಂಗಲನ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನಕ್ಕೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಗಾವಿಯ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಮ್ಮ ಪ್ರತಿμÁ್ಠನದ ಅಧ್ಯಕ್ಷ ಬಾಳಾಸಾಹೇಬ ಉದಗಟ್ಟಿ ಉಪಸ್ಥಿತಿ ಇರಲಿದ್ದಾರೆ ಎಂದು ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇತ್ರದಾನ ಚರ್ಮ ದಾನ ಹಾಗೂ ದೇಹದಾನ ಮಾಡಲು ಇಚ್ಚಿಸುವವರು ಡಾಕ್ಟರ್ ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ 9242496497 ಸಂಪರ್ಕಿಸಬಹುದು