Breaking News

ಬಲವಂತದ ಬಂದ್​ ಆಚರಣೆ ಸರಿಯಲ್ಲ – ರಸ್ತೆಗಿಳಿದರೆ ಕಾನೂನು ಕ್ರಮ: ಕಮಲ್ ಪಂತ್ ಎಚ್ಚರಿಕೆ!

Spread the love

ಬೆಂಗಳೂರು: ಹಿಜಾಬ್ ತೀರ್ಪು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ‌ ಕಮಲ್‌ ಪಂತ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಬುಧವಾರದಂದು ಸಭೆ ನಡೆಸಿದರು.

ನಗರದಲ್ಲಿ 144 ಸೆಕ್ಷನ್ ಜಾರಿಯಿದ್ದರೂ ಬಂದ್ ಕರೆ ನೀಡಿರುವುದು ಸರಿಯಲ್ಲ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸುವುದು, ರಸ್ತೆಯಲ್ಲಿ ಜನರನ್ನು ಗುಂಪು ಗೂಡಿಸುವುದು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಮಲ್​ ಪಂತ್​​ ಸಭೆಯಲ್ಲಿ ತಿಳಿಸಿದರು ಎನ್ನಲಾಗಿದೆ.

ಸಭೆ ಬಳಿಕ‌ ಮಾಧ್ಯಮಗಳೊಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ, ಮುಸ್ಲಿಂ ಮುಖಂಡರು ಬಂದ್​ಗೆ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆ ಮುಖಂಡರ ಜೊತೆ ಸಭೆ ಮಾಡಿದ್ದೇವೆ. ಹೊರಗಡೆ ಯಾವುದೇ ಕಾರ್ಯಕ್ರಮ ಮಾಡಲ್ಲ ಅಂತಾ ಹೇಳಿದ್ದಾರೆ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸುವುದಿಲ್ಲ ಹಾಗೂ ಕೆಲಸಗಳಿಗೆ ಹೋಗುವವರನ್ನು ಬಲವಂತವಾಗಿ ತಡೆಯಲ್ಲ ಎಂದು ಭರವಸೆ ನೀಡಿದ್ದಾರೆ. ಅದರೂ ಕೂಡ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ