Breaking News

ಕಳ್ಳತನ ಮಾಡಲು ಹೋಗಿ ಅಪಾರ್ಟ್‍ಮೆಂಟ್‍ನಿಂದ ಬಿದ್ದ ಘಟನೆ ವಿದ್ಯಾನಗರದ ಚನ್ನಮ್ಮ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ.

Spread the love

ತಾರಿಹಾಳ ಗ್ರಾಮದ ಪುಟ್ಟರಾಜ ಕಳ್ಳತನ ಮಾಡುವ ವೇಳೆ ಮೇಲಿಂದ ಬಿದ್ದಿದ್ದಾನೆ. ಈತ ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಕಳ್ಳತನ ಮಾಡಲು ವಿದ್ಯಾನಗರದ ಚನ್ನಮ್ಮ ಅಪಾರ್ಟ್‍ಮೆಂಟ್‍ಗೆ ತೆರಳಿದ್ದ. ಆದರೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಕಳ್ಳನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕುಡಿದ ಅಮಲಿನಲ್ಲಿ ಬಿದ್ದು, ಕಳ್ಳ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳ ಈ ಹಿಂದೆ ಎಲ್ಲೆಲ್ಲಿ ಕಳ್ಳತನ ಮಾಡಿದ್ದಾನೆ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ