Breaking News

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಹಾಲಿನ ದರ ಹೆಚ್ಚಳ ಸಾಧ್ಯತೆ

Spread the love

ಬೆಳಗಾವಿ: ಹಾಲಿನ ದರ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಒತ್ತಡ ಹಾಕುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಸಿಎಂ ಕೈಗೊಳ್ಳುವ ನಿರ್ಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

 

ಹಾಲಿನ ದರ ಪರಿಷ್ಕರಣೆ ಮಾಡುವುದರಿಂದ ಉಂಟಾಗುವ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಿ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ. ದೇಶದಲ್ಲಿಯೇ ಅತ್ಯಂತ ಕಡಿಮೆ ದರದಲ್ಲಿ ಕೆಎಂಎಫ್ ಹಾಲು ಪೂರೈಕೆ ಮಾಡುತ್ತಿದೆ. ರೈತರಿಗೆ ಅನುಕೂಲ ಕಲ್ಪಿಸಲು ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ