Breaking News

ಜನಪ್ರತಿನಿಧಿಗಳನ್ನು ಕೆಳಗಿಸುವ ಅಧಿಕಾರ ಜನರ ಕೈಗೆ.. ಶಾಸಕರು, ಸಚಿವರಿಗೆ ಸಿಎಂ ಮಾನ್​ ಹೊಸ ಟಾಸ್ಕ್​​

Spread the love

ಚಂಡೀಗಢ: ಪಂಜಾಬ್​ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರು ಸಚಿವರ, ಶಾಸಕರ ಭದ್ರತೆ ರದ್ದು, 25 ಸಾವಿರ ಸರ್ಕಾರಿ ಹುದ್ದೆಗಳ ನೇಮಕಕ್ಕೆ ಸೂಚನೆ, ಭ್ರಷ್ಟಾಷಾರ ನಿಗ್ರಹಕ್ಕೆ ಸಹಾಯವಾಣಿ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಉತ್ತಮವಾಗಿ ಕಾರ್ಯನಿರ್ವಹಿಸದ ಸಚಿವರನ್ನು ‘ಅಧಿಕಾರದಿಂದ ಕೆಳಗಿಳಿಸುವ ಹಕ್ಕನ್ನು ಜನರಿಗೆ ನೀಡಿ’ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಮೊಹಾಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಪಕ್ಷದ ಅಧ್ಯಕ್ಷ, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​, ಸಿಎಂ ಭಗವಂತ್​ ಮಾನ್​ ಅವರು ಸರ್ಕಾರದಲ್ಲಿ ಉತ್ತಮ ನಡೆಗಳನ್ನು ಅನುಸರಿಸುತ್ತಿದ್ದಾರೆ. ಜನರನ್ನು ಸಂಪರ್ಕಿಸಿ ಅವರ ಸಮಸ್ಯೆಯನ್ನು ಆಲಿಸುವ ಟಾರ್ಗೆಟ್​ ಅನ್ನು ಸಚಿವರು, ಶಾಸಕರಿಗೆ ನೀಡಿದ್ದಾರೆ. ಇದನ್ನು ಪಾಲಿಸದವರನ್ನು ಜನರೇ ಅಧಿಕಾರದಿಂದ ತೆಗೆದು ಹಾಕುವ ಬಗ್ಗೆ ಒತ್ತಾಯಿಸಬಹುದು ಎಂಬ ಅವಕಾಶವನ್ನು ನೀಡಿದ್ದಾರೆ ಎಂದು ಹೇಳಿದರು.

ಅಧಿಕಾರ ನಡೆಸುವವರು ರಾಜಧಾನಿಯಲ್ಲಿ ಕುಳಿತುಕೊಳ್ಳಬಾರದು. ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳ ಬಗ್ಗೆ ಅರಿಯಬೇಕು. ಹಳ್ಳಿಗಳಿಗೆ ಪ್ರವಾಸ ಮಾಡಬೇಕು.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ