Breaking News

ಮುಂದಿನ ಕೆಲವೇ ವರ್ಷಗಳ ಬಳಿಕ ಕಾಶ್ಮೀರಕ್ಕೆ ಸಿಆರ್​ಪಿಎಫ್ ಅಗತ್ಯವಿರಲ್ಲ: ಅಮಿತ್​ ಶಾ ವಿಶ್ವಾಸ

Spread the love

ಶ್ರೀನಗರ(ಜಮ್ಮು-ಕಾಶ್ಮೀರ): ಮುಂದಿನ ಕೆಲವೇ ವರ್ಷಗಳಲ್ಲಿ ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಕೇಂದ್ರೀಯ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​) ನಿಯೋಜನೆಗೊಳಿಸುವ ಅಗತ್ಯವೇ ಬೀಳುವುದಿಲ್ಲ ಎಂದು ಗೃಹ ಸಚಿವ ಅಮಿತ್​ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಶ್ರೀನಗರದ ಮೌಲಾನಾ ಆಜಾದ್​ ಮೈದಾನದಲ್ಲಿ ರವಿವಾರ ಸಿಆರ್​ಪಿಎಫ್​ನ 83ನೇ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ಪರೇಡ್​ನ ಪರಿವೀಕ್ಷಣೆ ಮಾಡಿ ಮಾತನಾಡಿದ ಅವರು, ಕಾಶ್ಮೀರ ಮತ್ತು ಈಶಾನ್ಯ ಭಾಗ ಮತ್ತು ನಕ್ಸಲ್​ ಪೀಡಿತ ಪ್ರದೇಶಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ಸಿಆರ್​ಪಿಎಫ್ ಸಂಕಲ್ಪ ಮಾಡಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ಈ ಮೂರು ಪ್ರದೇಶಗಳಲ್ಲಿ ಶಾಂತಿಯ ವಾತಾವರಣ ನೆಲೆಸಲಿದ್ದು, ಸಿಆರ್​ಪಿಎಫ್ ಅಗತ್ಯ ಇರುವುದಿಲ್ಲ ಎಂದು ಅವರು ಹೇಳಿದರು.

ಕಾಶ್ಮೀರ, ಈಶಾನ್ಯ ಮತ್ತು ನಕ್ಸಲ್​ ಪೀಡಿತ… ಹೀಗೆ ಮೂರು ಭಾಗಗಳಲ್ಲಿ ಸಂಪೂರ್ಣವಾದ ಶಾಂತಿ ಸ್ಥಾಪನೆಯಾದರೆ, ಅದರ ಸಂಪೂರ್ಣ ಹೆಗ್ಗಳಿಕೆಯೂ ಸಿಆರ್​ಪಿಎಫ್​ಗೆ ಸಲ್ಲುತ್ತದೆ ಎಂದು ಗೃಹಸಚಿವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ, ಜಮ್ಮು-ಕಾಶ್ಮೀರದಲ್ಲಿ 370 ಪರಿಚ್ಛೇದ ರದ್ದುಗೊಳಿಸಿದ ಬಳಿಕ ಭಯೋತ್ಪಾದನೆಯ ಮೇಲೆ ನಿರ್ಣಾಯಕ ನಿಯಂತ್ರಣ ಸಾಧಿಸಲು ಸಾಧ್ಯವಾಗಿದೆ ಎಂದೂ ಹೇಳಿದ್ದಾರೆ.

ಇನ್ನು, ಸಿಆರ್​ಪಿಎಫ್ ಸಂಸ್ಥಾಪನಾ ದಿನದ ಅಂಗವಾಗಿ ನಡೆಯುವ ಪರೇಡ್​ ಅನ್ನು​ ಇದೇ ಮೊದಲ ಬಾರಿಗೆ ದೆಹಲಿಯ ಹೊರಗಡೆ ಆಯೋಜಿಸಲಾಗಿದೆ. ಈ ಪರೇಡ್​​ನಲ್ಲಿ ಹುತಾತ್ಮ ಸಿಆರ್​ಪಿಎಫ್ ಯೋಧರ ಕುಟುಂಬಸ್ಥರಿಗೆ ಪದಕಗಳು ಮತ್ತು ಪ್ರಶಸ್ತಿಗಳನ್ನು ಅಮಿತ್​ ಶಾ ಪ್ರದಾನ ಮಾಡಿದರು.


Spread the love

About Laxminews 24x7

Check Also

ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಅನ್ನೋದು ತಪ್ಪು: ಪಂಡಿತಾರಾಧ್ಯಶ್ರೀ ಅಭಿಪ್ರಾಯ ವಿರೋಧಿಸಿದ ವಚನಾನಂದಶ್ರೀ

Spread the loveಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ