Breaking News

ಹೊಸಪೇಟೆ: ಆರಂಭದಲ್ಲಿ ನಿರಾಕರಣೆ, ನಂತರ‌ ಹಿಜಾಬ್ ಕಳಚಿ ಪರೀಕ್ಷೆಗೆ ಹಾಜರು

Spread the love

ಹೊಸಪೇಟೆ (ವಿಜಯನಗರ): ಪ್ರಾಚಾರ್ಯರ ಮನವೊಲಿಕೆ ನಂತರ ಎಂಟು ವಿದ್ಯಾರ್ಥಿನಿಯರು‌ ಹಿಜಾಬ್ ಕಳಚಿ ನಗರದ ವಿಜಯನಗರ ಕಾಲೇಜಿನಲ್ಲಿ ಸೋಮವಾರ ಪದವಿ ಪರೀಕ್ಷೆಗೆ ಹಾಜರಾದರು.

ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿನಿಯರು ಮುಂದಾಗಿದ್ದರು.

ಆದರೆ, ಪ್ರಾಚಾರ್ಯ ವಿ.ಎಸ್. ಪ್ರಭಯ್ಯ, ಅವರನ್ನು ತಡೆದು, ‘ನ್ಯಾಯಾಲಯದ ಆದೇಶ ಪಾಲಿಸಬೇಕು’ ಎಂದು ಹೇಳಿದರು.

ಮಂಗಳೂರಿನಲ್ಲಿ ಅವಕಾಶ ನಿರಾಕರಣೆ: ನಗರದ ವಾಮಂಜೂರಿನ ಸಂತ ರೇಮಂಡ್ಸ್‌ ಕಾಲೇಜಿನಲ್ಲಿ ಸೋಮವಾರ ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿನಿಯರಿಗೆ ಅರ್ಥಶಾಸ್ತ್ರ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ. ಹೈಕೋರ್ಟ್‌ ತೀರ್ಪಿನ ಬಳಿಕ ಕಾಲೇಜಿನ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದ್ದು, ವಿದ್ಯಾರ್ಥಿನಿಯರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮಿನಿಸ್ಟರ್​​ ಕಾರಿಗೆ ರೈತರ ಮುತ್ತಿಗೆ

Spread the loveಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ