ರಾಜ್ಯದಲ್ಲಿ ಯುಗಾದಿ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಗುಲ್ಲು ಎದ್ದಿದೆ. ಹೀಗಾಗಿ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿರುವ ರಮೇಶ ಜಾರಕಿಹೊಳಿ ಮತ್ತೆ ತಮ್ಮ ಕಸರತ್ತು ಮುಂದುವರಿಸಿದ್ದಾರೆ. ದಿಢೀರ್ ಅಂತಾ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಹೌದು ಬೆಳಗಾವಿಯ ಸಾಂಬ್ರಾ ಏರ್ಪೆÇೀರ್ಟ್ನಿಂದ ಇಂದು ಬೆಳಗ್ಗೆ 9.55ರ ಫ್ಲೈಟ್ನಲ್ಲಿ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಸಿಡಿ ಕೇಸ್ನಿಂದ ಮಂತ್ರಿ ಸ್ಥಾನ ಕಳೆದುಕೊಂಡು ಕಂಗಾಲಾಗಿರುವ ಗೋಕಾಕ್ ಸಾಹುಕಾರ್ಗೆ ಈಗ ಮತ್ತೆ ಸಂಪುಟ ಸೇರುವ ಆಸೆ ಗರಿಗೆದರಿದೆ. ಇದಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಅಥವಾ ಇಲ್ಲವಾ ಎಂಬುದನ್ನು ಕಾದು ನೋಡಬೇಕಿದೆ.