Breaking News

ವ್ಯಕ್ತಿಯ ಕೊಲೆ ಮಾಡಿ ಕಾರಿಗೆ ಬೆಂಕಿಯಿಟ್ಟ ಪ್ರಕರಣ: ಮೂವರು ಆರೋಪಿಗಳ ಬಂಧನ!

Spread the love

ಅರಕಲಗೂಡು (ಹಾಸನ): ಅರಕಲಗೂಡು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಮಾ.15ರಂದು ಕಾರಿನ ಸಮೇತ ವ್ಯಕ್ತಿ ಸುಟ್ಟು ಹಾಕಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಣನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳವಾಡಿಯ ಹಿರಿಕೆರೆ ಏರಿಯ ಮೇಲೆ ಕಾರೊಂದು ಸುಟ್ಟು ಕರಕಲಾಗಿ, ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ವ್ಯಕ್ತಿಯ ಶವ ದೊರಕಿತ್ತು.ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದ ಕೊಣನೂರು ಪೊಲೀಸರು 3 ಮಂದಿಯನ್ನು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲ ನಗರ ತಾಲೂಕಿನ ಗೊಂದಿಬಸವನಹಳ್ಳಿ ಗ್ರಾಮದ ಚಾಲಕರುಗಳಾದ ಶಶಿಕುಮಾರ್ (30), ಶಿವ (28) ಹಾಗೂ ಯೋಗೇಶ್ (25) ಬಂಧಿತ ಆರೋಪಿಗಳು.

ಕರಣ: ಕಾರಿನಲ್ಲಿ ಸುಟ್ಟು ಕರಕಲಾದ ಅನಿಲ್ ಕುಮಾರ್ ಮತ್ತು ಆರೋಪಿಗಳು ಸ್ನೇಹಿತರಾಗಿದ್ದರು. ಅನಿಲ್ ಕುಮಾರ್ ಆರೋಪಿಗಳ ಪತ್ನಿಯರ ಜೊತೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಕಾರಣ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಆತನಿಗೆ ಮದ್ಯಪಾನ ಮಾಡಿಸಿ ನಂತರ ಆತನ ತಲೆಗೆ ಕಬ್ಬಿಣದ ಸಲಾಕೆಯಿಂದ ಹೊಡೆದು ಕೊಲೆ ಮಾಡಿ ಬಳಿಕ ಅರಕಲಗೂಡು ತಾಲೂಕಿನ ಬೆಳವಾಡಿಯ ಕೆರೆಯ ಏರಿ ಮೇಲೆ ಕಾರು ನಿಲ್ಲಿಸಿ, ಕಾರಿನ ಮೇಲೆ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು.


Spread the love

About Laxminews 24x7

Check Also

ಇನ್ನೂ ಎರಡು ದಿನ ಮಹಾಮಳೆ

Spread the loveಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ (ಜು.7) ಜೋರು ಗಾಳಿ ಸಹಿತ ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ