Breaking News

ಕಾಲಕ್ಕೆ ತಕ್ಕಂತೆ ಆರೋಪ ಮಾಡ್ತಾರೆ ಹೆಚ್.​ಡಿ.ಕೆ; ಜಗದೀಶ್ ಶೆಟ್ಟರ್

Spread the love

ಯಾದಗಿರಿ: ಕಾಲಕ್ಕೆ ತಕ್ಕಂತೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಆರೋಪ ಮಾಡ್ತಿದ್ದು, ಇದಕ್ಕೆ ಅರ್ಥವಿಲ್ಲ. ಅವರ ಸರ್ಕಾರ ಡ್ರಗ್ಸ್​ ಮಾಫಿಯಾದಿಂದ ಉರುಳಿದೆ ಎಂದು ಅಂದೇ ಹೇಳಬೇಕಿತ್ತಲ್ಲ, ಇವಾಗ ನೆನಪಾಯ್ತಾ ಅವ್ರಿಗೆ ಎಂದು ಸಚಿವ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ.

ಜಿಲ್ಲೆಯ ಕಡೆಚುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಬಣ ಮತ್ತು ಕಾಂಗ್ರೆಸ್​ನ ಕೆಲ ಗುಂಪುಗಳು ತಂತ್ರಗಾರಿಕೆ ಮಾಡುವ ಮೂಲಕ ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನ ಮಾಡಿದ್ದರು ಎಂದು ಕುಮಾರಸ್ವಾಮಿ ಆರೋಪಿ

ಈಗ ಡ್ರಗ್ಸ್​ ಮಾಫಿಯಾದ ಹಣದಿಂದ ತನ್ನ ಸರ್ಕಾರ ಉರುಳಿದೆ ಎಂದು ಆಪಾದನೆ ಮಾಡ್ತಿದ್ದಾರೆ. ಮುಂದೆ ಮತ್ತೊಂದಕ್ಕೆ, ಹೀಗೆ ಕಾಲಕ್ಕೆ ತಕ್ಕಂತೆ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಈ ಹಿಂದೆ ಹೆಚ್​ಡಿಕೆ ಮುಖ್ಯಮಂತ್ರಿ ಆಗಿದ್ದಾಗ ಇಂಟಲಿಜೆನ್ಸಿಯಿಂದ ಮಾಹಿತಿ ಗೊತ್ತಿರಬೇಕಿತ್ತಲ್ಲ, ಆವಾಗ ಡ್ರಗ್ಸ್​ ಮಾಫಿಯಾ ಇರಲಿಲ್ಲವಾ ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

ಯಾವುದೇ ಮುಲಾಜಿಲ್ಲದೆ ನಮ್ಮ ಸರ್ಕಾರ ಹಾಗೂ ಗೃಹ ಇಲಾಖೆ ಡ್ರಗ್ಸ್​ ಮಾಫಿಯಾ ಹತ್ತಿಕ್ಕುವ ಪ್ರಯತ್ನ ಮಾಡುತ್ತೆ. ಇದರಲ್ಲಿ ದೊಡ್ಡವರಿರಲಿ, ಸಣ್ಣವರಿರಲಿ ಎಲ್ಲರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಸಿದ್ದರು. ಈಗ ಡ್ರಗ್ಸ್​​ ಮಾಫಿಯಾದಿಂದ ತಮ್ಮ ಸರ್ಕಾರ ಬಿತ್ತು ಎನ್ನುತ್ತಿರುವುದು ಹಾಸ್ಯಾಸ್ಪದ ಎಂದರು.

 


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ