Breaking News

ಹಿಜಾಬ್ ಬಳಿಕ ರಾಜ್ಯವ್ಯಾಪಿ ಹರಡುತ್ತಿರುವ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ

Spread the love

ಬೆಂಗಳೂರು, ಮಾರ್ಚ್ 24: ಹಿಜಾಬ್ ಕಿಚ್ಚು ಕೊಂಚ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಧರ್ಮ ಧರ್ಮಗಳ ನಡುವೆ ಬಿರುಕು ಮೂಡಿಸುತ್ತಿದೆ. ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಈ ಕಿಚ್ಚು ಸದ್ಯ ವ್ಯಾಪಾರಕ್ಕೂ ಅಂಟಿಕೊಂಡಿದೆ. ಇದು ಕೊರೊನಾ ಅದರ ರೂಪಾಂತರಿಗಳಿಗಿಂತಲೂ ವೇಗವಾಗಿ ಹರಡುತ್ತಿದೆ.

 

ಕರಾವಳಿಯ ದೇವಸ್ಥಾನಗಳ ಜಾತ್ರೋತ್ಸವದ ವೇಳೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಹಾಕಿರುವ ವಿಚಾರ ರಾಜ್ಯದಾದ್ಯಂತ ದೊಡ್ಡ ಚರ್ಚೆಯನ್ನು ಉಂಟು ಮಾಡಿದೆ. ಇದು ಸದ್ಯ ಸಿಲಿಕಾನ್ ಸಿಟಿಯತ್ತ ಕೂಡ ವಾಲಿದೆ. ಬೆಂಗಳೂರಿನಲ್ಲಿಯೂ ಹಿಂದೂ ಸಂಘಟನೆಗಳು ಬಹಿಷ್ಕಾರ ಚಳವಳಿ ಶುರು ಮಾಡಿದ್ದಾರೆ. ಕೆಲ ಹಿಂದೂ ದೇಗುಲಗಳಿಗೆ ಸೇರಿದ ಅಂಗಡಿಗಳಿಂದ ಮುಸ್ಲಿಮರನ್ನು ಹೊರಹಾಕುವಂತ ಕೆಲಸಗಳು ಆಗಿರುವುದು ಕಂಡುಬಂದಿದೆ. ಉಪ್ಪಾರಪೇಟೆಯಲ್ಲಿ 8 ಮುಸ್ಲಿಮರ ಅಂಗಡಿಗಳನ್ನು ಹಿಂದೂ ಕಾರ್ಯಕರ್ತರು ಬಂದ್ ಮಾಡಿಸಿದ್ದಾರೆ. ಉಪ್ಪಾರಪೇಟೆಯ ಆಂಜನೇಯಸ್ವಾಮಿ ದೇಗುಲದ ಮುಂದಿರುವ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಮುಸ್ಲಿಮರ ಅಂಗಡಿಗಳನ್ನು ಕ್ಲೋಸ್ ಮಾಡಿಸಲಾಗಿದೆ.

ಬನಶಂಕರಿ ಸೇರಿ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇಗುಲಗಳ ಜಾತ್ರೆಗಳಲ್ಲಿ, ದೇಗುಲಕ್ಕೆ ಸಂಬಂಧಿಸಿದ ಕಟ್ಟಡಗಳಲ್ಲಿ ವ್ಯಾಪಾರ ಮಾಡಲು ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂಪರ ಮುಖಂಡರು ಒತ್ತಾಯಿಸಿದ್ದಾರೆ.ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ತಹಶೀಲ್ದಾರ್ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ನಂತ್ರವಷ್ಟೇ ಪ್ರತಿಭಟನೆ ಕೈಬಿಟ್ಟಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ