Breaking News
Home / ರಾಜಕೀಯ / ಪಬ್ಲಿಕ್ ಟಿವಿಯ ರಂಗನಾಥ್, ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

ಪಬ್ಲಿಕ್ ಟಿವಿಯ ರಂಗನಾಥ್, ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

Spread the love

ಬೆಂಗಳೂರು, ಮಾ.24: ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್ . ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಲು ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಫೆಬ್ರವರಿ 3ರಂದು ಪಬ್ಲಿಕ್ ಟಿವಿ ವಾಹಿನಿಯು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯಡಿಯಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ವಾಹಿನಿಯ ಮುಖ್ಯಸ್ಥ ಎಚ್ ಆರ್.

ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗರ್ ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ಮೂಲಕ ಅವರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ. ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ವಿರುದ್ಧ ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ದೂರುದಾರರ ಪರ ವಕೀಲ ಮುಹಮ್ಮದ್ ಗೌಸ್ ಅವರ ವಾದವನ್ನು ಪರಿಗಣಿಸಿದ ನ್ಯಾಯಾಲಯವು ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ) 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.

ಭಾರತ ದೇಶ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ ಎಂದು ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್ . ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ಅವರ ಹೇಳಿಕೆಯು ಪ್ರಜಾ ಪ್ರಭುತ್ವ ರಾಷ್ಟ್ರದಲ್ಲಿ ಎರಡು ಸಮುದಾಯಗಳ ಮಧ್ಯೆ ವೈರತ್ವ ನಿರ್ಮಾಣ ಉದ್ದೇಶದಿಂದ ಕೂಡಿದೆ. ಹಾಗಾಗಿ ದೂರು ನೀಡಲಾಗಿತ್ತು ಎಂದು ದೂರು ದಾರ ವಕೀಲ ಮುಹಮ್ಮದ್ ಗೌಸ್ ತಿಳಿಸಿದರು.


Spread the love

About Laxminews 24x7

Check Also

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

Spread the love ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ