Breaking News

ಅಂಗವೈಕಲ್ಯ ಮೆಟ್ಟಿ ನಿಂತು ಸಾಧನೆಯ ಶಿಖರದತ್ತ ಹುಬ್ಬಳ್ಳಿ ಹೈದನ ದಿಟ್ಟ ಹೆಜ್ಜೆ

Spread the love

ಹುಬ್ಬಳ್ಳಿ: ಸಣ್ಣದೊಂದು ಅಂಗವೈಕಲ್ಯ ಇಡೀ ಜೀವನವನ್ನೇ ಅಂಧಕಾರಕ್ಕೆ ತಳ್ಳಿ ಬಿಡುತ್ತದೆ‌.‌ ಆದ್ರೆ ಹುಬ್ಬಳ್ಳಿಯ ಹುಡುಗನೊಬ್ಬ ತನ್ನ ಜೀವನದಲ್ಲಾದ ಒಂದು ಅವಘಡದಿಂದ ಮತ್ತೆ ಫೀನಿಕ್ಸ್ ಪಕ್ಷಿಯಂತೆ ಮೈಕೊಡವಿ ಮೇಲೆದ್ದು ಬಂದ. ಅಂಗವೈಕಲ್ಯ ಇದ್ದವರು ಕೂಡಾ ಏನು ಬೇಕಾದ್ರೂ ಸಾಧಿಸಬಹುದು ಎಂಬುದನ್ನು ನಿರೂಪಿಸಿ, ಸಾಧಿಸಿ ತೋರಿಸುತ್ತಿದ್ದಾನೆ.26 ಬಾರಿ ಶಸ್ತ್ರಚಿಕಿತ್ಸೆ: ಈ ಬಾಲಕ ವಾಣಿಜ್ಯನಗರಿ ಹುಬ್ಬಳ್ಳಿಯ ನಿವಾಸಿ ಮಂಜುನಾಥ ಬಳ್ಳಾರಿ ಎಂಬುವವರ ಪುತ್ರ. ಹೆಸರು ಸಿದ್ಧಾರ್ಥ ಬಳ್ಳಾರಿ. ಸಾಧನೆ ಮಾಡಬೇಕು ಅಂದರೆ ಅದಕ್ಕೆ ಸಾಧಿಸುವ ಛಲವೊಂದಿದ್ದರೆ ಸಾಕು, ಎಂತಹದ್ದೇ ಸಮಸ್ಯೆ ಎದುರಾದರೂ ಗೆಲ್ಲಬಹುದು ಎಂಬುದನ್ನು ತೋರಿಸಿಕೊಟ್ಟ ಸಾಧಕ ಈತ.

26 ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾದ ಈತನ ದೇಹದಲ್ಲಿ ಸುಮಾರು 6,500ಕ್ಕೂ ಅಧಿಕ ಹೊಲಿಗೆಗಳಿವೆ. ಆದರೂ ಛಲ ಬಿಡದೆ ಅಂತರರಾಷ್ಟ್ರೀಯ ಐಎಸ್ಎಫ್ ಕ್ರೀಡಾಕೂಟಕ್ಕೆ ಆಯ್ಕೆಯಾದ್ದಾನೆ. ಇದೀಗ ದೇಶವನ್ನು ಹೆಮ್ಮೆಯಿಂದ ಪ್ರತಿನಿಧಿಸುತ್ತಿದ್ದಾನೆ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ