Breaking News
Home / ರಾಜಕೀಯ / ಅಂಗವೈಕಲ್ಯ ಮೆಟ್ಟಿ ನಿಂತು ಸಾಧನೆಯ ಶಿಖರದತ್ತ ಹುಬ್ಬಳ್ಳಿ ಹೈದನ ದಿಟ್ಟ ಹೆಜ್ಜೆ

ಅಂಗವೈಕಲ್ಯ ಮೆಟ್ಟಿ ನಿಂತು ಸಾಧನೆಯ ಶಿಖರದತ್ತ ಹುಬ್ಬಳ್ಳಿ ಹೈದನ ದಿಟ್ಟ ಹೆಜ್ಜೆ

Spread the love

ಹುಬ್ಬಳ್ಳಿ: ಸಣ್ಣದೊಂದು ಅಂಗವೈಕಲ್ಯ ಇಡೀ ಜೀವನವನ್ನೇ ಅಂಧಕಾರಕ್ಕೆ ತಳ್ಳಿ ಬಿಡುತ್ತದೆ‌.‌ ಆದ್ರೆ ಹುಬ್ಬಳ್ಳಿಯ ಹುಡುಗನೊಬ್ಬ ತನ್ನ ಜೀವನದಲ್ಲಾದ ಒಂದು ಅವಘಡದಿಂದ ಮತ್ತೆ ಫೀನಿಕ್ಸ್ ಪಕ್ಷಿಯಂತೆ ಮೈಕೊಡವಿ ಮೇಲೆದ್ದು ಬಂದ. ಅಂಗವೈಕಲ್ಯ ಇದ್ದವರು ಕೂಡಾ ಏನು ಬೇಕಾದ್ರೂ ಸಾಧಿಸಬಹುದು ಎಂಬುದನ್ನು ನಿರೂಪಿಸಿ, ಸಾಧಿಸಿ ತೋರಿಸುತ್ತಿದ್ದಾನೆ.26 ಬಾರಿ ಶಸ್ತ್ರಚಿಕಿತ್ಸೆ: ಈ ಬಾಲಕ ವಾಣಿಜ್ಯನಗರಿ ಹುಬ್ಬಳ್ಳಿಯ ನಿವಾಸಿ ಮಂಜುನಾಥ ಬಳ್ಳಾರಿ ಎಂಬುವವರ ಪುತ್ರ. ಹೆಸರು ಸಿದ್ಧಾರ್ಥ ಬಳ್ಳಾರಿ. ಸಾಧನೆ ಮಾಡಬೇಕು ಅಂದರೆ ಅದಕ್ಕೆ ಸಾಧಿಸುವ ಛಲವೊಂದಿದ್ದರೆ ಸಾಕು, ಎಂತಹದ್ದೇ ಸಮಸ್ಯೆ ಎದುರಾದರೂ ಗೆಲ್ಲಬಹುದು ಎಂಬುದನ್ನು ತೋರಿಸಿಕೊಟ್ಟ ಸಾಧಕ ಈತ.

26 ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾದ ಈತನ ದೇಹದಲ್ಲಿ ಸುಮಾರು 6,500ಕ್ಕೂ ಅಧಿಕ ಹೊಲಿಗೆಗಳಿವೆ. ಆದರೂ ಛಲ ಬಿಡದೆ ಅಂತರರಾಷ್ಟ್ರೀಯ ಐಎಸ್ಎಫ್ ಕ್ರೀಡಾಕೂಟಕ್ಕೆ ಆಯ್ಕೆಯಾದ್ದಾನೆ. ಇದೀಗ ದೇಶವನ್ನು ಹೆಮ್ಮೆಯಿಂದ ಪ್ರತಿನಿಧಿಸುತ್ತಿದ್ದಾನೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ