ಮುಂಡಗೋಡ: ಇಲ್ಲಿನ ತಹಸೀಲ್ದಾರ್ ಶ್ರೀಧರ ಮುಂದಲಮನೆ ಅವರ ಬಂಧನಕ್ಕೆ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್.ಪಿ. ರಶ್ಮಿ ಅವರು ಮುಂಡಗೋಡಕ್ಕೆ ಆಗಮಿಸಿದ್ದಾರೆ.
2014ನೇ ಬ್ಯಾಚ್ನಲ್ಲಿ ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಸನಿಹದ ಕುಕನೂರು ಗ್ರಾಮದ ಶ್ರೀಧರ ಮುಂದಲಮನೆ ಸದ್ಯ ಮುಂಡಗೋಡ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ನೌಕರಿ ಪಡೆದಿದ್ದಾರೆ ಎಂಬ ದೂರು ದಾಖಲಾಗಿದ್ದು, ತಹಸೀಲ್ದಾರ್ ಬಂಧನಕ್ಕೆ ರಶ್ಮಿ ಸೇರಿ ನಾಲ್ವರು ಶುಕ್ರವಾರ ಬೆಳಗಿನ ಜಾವ ಆಗಮಿಸಿದ್ದಾರೆ. ತಹಸೀಲ್ದಾರ್ ಮನೆ ಮುಂದೆ ಹಾಗೂ ಹಿಂದೆ ಕಾಯುತ್ತಾ ಕುಳಿತ್ತಿದ್ದಾರೆ. 10 ಗಂಟೆಯಾದರೂ ತಹಸೀಲ್ದಾರ್ರ ಮನೆ ಬಾಗಿಲು ತೆರೆದಿಲ್ಲ.
ಶ್ರೀಧರ ಮುಂದಲಮನೆ ಅವರು ತಾನು ವಾಲ್ಮೀಕಿ ಎಂದು ನಕಲಿ ಜಾತಿ ಪ್ರಮಾಣಪತ್ರ ನೀಡಿ ಕೆಲಸಕ್ಕೆ ಸೇರಿದ್ದಾರೆ ಎಂದು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ 2022ರ ಫೆಬ್ರವರಿ 12ರಂದು ಗೀರೀಶ ರೊಡಕರ ಎಂಬುವರು ಪ್ರಕರಣ ದಾಖಲಿಸಿದ್ದಾರೆ.