Breaking News

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಸಮಿತಿ ರಚನೆ: ಬೊಮ್ಮಾಯಿ

Spread the love

ಬೆಂಗಳೂರು: ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್‍ನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರಕಿಸುವುದು ಹಾಗೂ ಒಂದೇ ಬಾರಿಗೆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಮಿತಿ ರಚಿಸಲಾಗಿದೆ ಎಂದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ