Breaking News

IPL 2022: ಚೆನ್ನೈ-ಕೋಲ್ಕತ್ತಾ ಹಣಾಹಣಿ: ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡ ಕೆಕೆಆರ್​​

Spread the love

ಮುಂಬೈ: ಇಂಡಿಯನ್​ ಪ್ರೀಮಿಯರ್ ಲೀಗ್​​ನ 15ನೇ ಆವೃತ್ತಿಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರನ್ನರ್​ ಅಪ್ ತಂಡ ಕೋಲ್ಕತ್ತಾ ನೈಟ್​​ ಮುಖಾಮುಖಿಯಾಗಿವೆ. ಟಾಸ್​ ಗೆದ್ದಿರುವ ಕೋಲ್ಕತ್ತಾ ನೈಟ್​ ರೈಡರ್ಸ್​​ ತಂಡ ಬೌಲಿಂಗ್​​ ಆಯ್ದುಕೊಂಡಿದೆ. ಮುಂಬೈನ ವಾಖೆಂಡೆ ಮೈದಾನದಲ್ಲಿ ಪಂದ್ಯ ಆರಂಭಗೊಂಡಿದೆ.

ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟರ್​ ಆಗಿರುವ ಶ್ರೇಯಸ್ ಅಯ್ಯರ್​ ಕೋಲ್ಕತ್ತಾ ನೈಟ್​ ರೈಡರ್ಸ್ ಮುನ್ನಡೆಸುತ್ತಿದ್ದು, ಆಲ್​ರೌಂಡರ್​ ರವೀಂದ್ರ ಜಡೇಜಾ ಸಿಎಸ್​​ಕೆ ತಂಡದ ನಾಯಕತ್ವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಉಭಯ ತಂಡದ ನಾಯಕತ್ವ ಯುವ ಆಟಗಾರರು ಹೊತ್ತುಕೊಂಡಿರುವ ಕಾರಣ ಇಂದಿನ ಪಂದ್ಯದಲ್ಲಿ ಗೆಲುವು ದಾಖಲು ಮಾಡುವುದರೊಂದಿಗೆ ಅಭಿಯಾನ ಆರಂಭ ಮಾಡುವ ಇರಾದೆ ಹೊಂದಿದ್ದಾರೆ.

ಕೆಕೆಆರ್ ತಂಡ ಆಡುವ 11ರ ಬಳಗದಲ್ಲಿ ವಿದೇಶಿ ಆಟಗಾರರಾದ ಸ್ಯಾಮ್ ಬಿಲ್ಲಿಂಗ್ಸ್, ಆಂಡ್ರೆ ರಸೆಲ್, ಸುನಿಲ್ ನರೈನ್​ಗೆ ಮಣೆ ಹಾಕಿದ್ದು, ಚೆನ್ನೈ ನಾಲ್ಕು ವಿದೇಶಿ ಆಟಗಾರರಾದ ಕಾನ್ವೇ, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆಗೆ ಕಣಕ್ಕಿಳಿಸಿದೆ. ಕಳೆದ ವರ್ಷದ ಆವೃತ್ತಿಯಲ್ಲಿ ಚೆನ್ನೈ ವಿರುದ್ಧ ಕೆಕೆಆರ್​ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ