Breaking News

ಪಾವಗಡ ಬಸ್ ಅಪಘಾತ: ಬೆಡ್​ ನೀಡದೇ ಮಗನನ್ನು ಕೊಂದ್ರು.. ಒಬ್ಬನೇ ಮಗನ ಕಳೆದುಕೊಂಡ ಪೋಷಕರ ಆಕ್ರಂದನ

Spread the love

ಬೆಂಗಳೂರು: ಇತ್ತೀಚೆಗೆ ತುಮಕೂರು ಜಿಲ್ಲೆಯ ಪಾವಗಡಲ್ಲಿ ಸಂಭವಿಸಿದ್ದ ಬಸ್​ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮಹೇಂದ್ರ(19) ಇಂದು ಕೊನೆಯುಸಿರೆಳೆದಿದ್ದಾನೆ. ಇತ್ತ ಒಬ್ಬನೇ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಬೆಡ್​ ನೀಡದೇ ನಮ್ಮ ಮಗನನ್ನು ಸಾಯಿಸಿಬಿಟ್ಟರು ಎಂದು ಮೃತ ಯುವಕನ ತಂದೆ ಆಕ್ರೋಶ ವ್ಯಕ್ತಪಡಿಸಿದರು.

ವಿಕ್ಟೋರಿಯಾ ಆಸ್ಪತ್ರೆ ಶವಾಗಾರದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಯುವಕನ ತಂದೆ ಶ್ರೀನಿವಾಸ್​, ಅಪಘಾತ ಸಂಭವಿಸಿದ ದಿನ ನಿಮ್ಹಾನ್ಸ್​ನಲ್ಲಿ ಬೆಡ್ ಕೊಟ್ಟಿದ್ದರೆ ನನ್ನ ಮಗ ಉಳಿಯುತ್ತಿದ್ದ. ಬೆಡ್ ಕೊಡದೆ ಅಲ್ಲಿ ಇಲ್ಲಿ ಅಲೆದಾಡುವಂತಾಯಿತು. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿಯಾದರೂ, ಬಡವರಿಗೆ ಬೆಡ್ ಕೊಡದೇ ಆತನನ್ನು ಸಾಯಿಸಿದರು ಎಂದು ಕಣ್ಣೀರಿಟ್ಟರು.


Spread the love

About Laxminews 24x7

Check Also

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

Spread the loveಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ