Breaking News

ಮಂಡ್ಯ ತಹಸೀಲ್ದಾರ್​ ಅಮಾನತು: ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಗ್ರಾಮಸ್ಥರು

Spread the love

ಮಂಡ್ಯ: ಮಂಡ್ಯ ತಹಸೀಲ್ದಾರ್ ಅಮಾನತುಗೊಂಡಿದ್ದಕ್ಕೆ ಹಳೇ ಬೂದನೂರು ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿರುವ ಅಪರೂಪದ ಪ್ರಸಂಗ ವರದಿಯಾಗಿದೆ.

ಕರ್ತವ್ಯ ಲೋಪ, ಲಂಚಕ್ಕೆ ಬೇಡಿಕೆ ಮತ್ತು ದುರ್ನಡತೆ ಆರೋಪದಡಿ ತಹಸೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಎಂಬುವರನ್ನು ಅಮಾನತು ಮಾಡಲಾಗಿದೆ.

ತಹಸೀಲ್ದಾರ್ ಅಮಾನತು ಆಗಿದ್ದಕ್ಕೆ ಡಿಸಿ ಅಶ್ವಥಿಗೆ ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮಸ್ಥರು ಜೈಕಾರ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಗ್ರಾಮಸ್ಥರು ಸ್ವಂತ ಮನೆಗಾಗಿ ಹಲವು ಬಾರಿ ಹೋರಾಟ ನಡೆಸಿದ್ದಾರೆ. ಆದರೆ, ತಹಸೀಲ್ದಾರ್​ ಚಂದ್ರಶೇಖರ್​, ನಿವೇಶನ ಹಂಚಿಕೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಇದೆ. ನ್ಯಾಯಕ್ಕಾಗಿ ಹೋರಾಟ ನಡೆಸಿದ್ದ ಗ್ರಾಮಸ್ಥರಿಗೆ ನ್ಯಾಯ ಕೊಡಿಸುವಲ್ಲಿ ವಿಫಲವಾಗಿದ್ದಾರೆ. ಹಲವು ಬಾರಿ ತಹಸೀಲ್ದಾರ್​ಗೆ ಮನವಿ ಸಲ್ಲಿಸಿದ್ದರು. ಆದರೂ ಪ್ರಯೋಜನ ಆಗಿರಲಿಲ್ಲ.

ನಿವೇಶನ ಕೊಡಿಸುವಲ್ಲಿ ವಿಫಲ, ಕರ್ತವ್ಯ ಲೋಪ ಸೇರಿದಂತೆ 13 ಕಾರಣ ನೀಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೂದನೂರು ಗ್ರಾಮಸ್ಥರು ಡಿಸಿ ಅಶ್ವಥಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ


Spread the love

About Laxminews 24x7

Check Also

2ನೇ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ: ಸಚಿವ ಎಂ.ಬಿ.ಪಾಟೀಲ್

Spread the loveಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ