Breaking News

ಕೊಂಡೋತ್ಸವದ ವೇಳೆ ಅವಘಡ; ಮಹಿಳೆ ಸಾವು, 45ಕ್ಕೂ ಹೆಚ್ಚು ಮಂದಿಗೆ ಗಾಯ

Spread the love

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಕೊಂಡೋತ್ಸವ ನಡೆಯುತ್ತಿದ್ದ ವೇಳೆ ಅವಘಡ ನಡೆದಿದೆ. ಕಟ್ಟಡ ಒಂದರ ಸಜ್ಜ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ್ದಾಳೆ.

ಪುಟ್ಟಲಿಂಗಮ್ಮ ಮೃತ ಮಹಿಳೆ. ಗ್ರಾಮದ ಬಸವೇಶ್ವರ ದೇವಾಲಯದ ಕೊಂಡೋತ್ಸವ ಇತ್ತು. ಈ ಕೊಂಡೋತ್ಸವ ನೋಡಲು ಹಳೆಯ ಕಟ್ಟಡದ ಮೇಲೆ ಜನರು ನಿಂತಿದ್ದರು. ಹಳೆ ಕಟ್ಟಡವಾದ್ದರಿಂದ ಮನೆಯ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ. ದುರ್ಘಟನೆಯಲ್ಲಿ ಸುಮಾರು 30 ರಿಂದ 40 ಜನರಿಗೆ ಗಾಯವಾಗಿದೆ. ಗಾಯಳುಗಳಿಗೆ ಮದ್ದೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ