Breaking News

ದೆಹಲಿ ಸಿಎಂ ಕ್ಷಮೆ ಕೇಳಬೇಕು:ತೇಜಸ್ವಿ ಸೂರ್ಯ

Spread the love

ಬೆಂಗಳೂರು: ‘ದಿ ಕಾಶ್ಮೀರ ಫೈಲ್ಸ್’ ಮತ್ತು ಕಾಶ್ಮೀರಿ ಪಂಡಿತರ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಕ್ಷಮೆ ಕೇಳುವವರೆಗೆ ಪ್ರತಿಭಟನೆಗಳು ಮುಂದುವರೆಯುತ್ತವೆ ಎಂದು ತೇಜಸ್ವಿ ಸೂರ್ಯ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆಯ ಮುಂದೆ ಪ್ರತಿಭಟನೆ ನಡೆಸಿದ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತೇಜಸ್ವಿ ಸೂರ್ಯ ‘ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಲೇವಡಿ ಮಾಡಿದ ರೀತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದೇವೆ. ನಾವು ಕೇಜ್ರಿವಾಲ್ ಅವರಿಂದ ಬೇಷರತ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತೇವೆ. ಅವರು ಕ್ಷಮೆ ಕೇಳುವವರೆಗೂ ಪ್ರತಿಭಟನೆಗಳು ಮುಂದುವರೆಯಲಿವೆ ಎಂದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ