ರಾಜ್ಯದಲ್ಲಿ ಹಲಾಲ್ ದಂಗಲ್ ಜೋರಾಗಿ ಬೀಸುತ್ತಿದೆ, ಈ ನಡುವೆ ಮಾಂಸವನ್ನೇ ತಿನ್ನದ ಸ್ವಾಮೀಜಿಗಳು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಮಾಂಸಹಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾದ ವೇಳೆಯಲ್ಲಿ ಮೊಟ್ಟೆ ನೀಡದಂತೆ ರಾಜ್ಯ ಸರ್ಕಾರದ ವಿರುದ್ದ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿ ಮೊಟ್ಟೆ ಮಾಂಸಹಾರ ಎನ್ನುವಂತೆ ಬಿಂಬಿಸಿದರು.
ಅಂದು ಮೊಟ್ಟೆ ಬೇಡ ಅಂತ ಹೇಳಿದವರು ಇಂದು ಇಂತದೇ ಮಾಂಸ ತಿನ್ನಿ ಅಂತ ಹೇಳುತ್ತಿರುವುದು ಯಾಕೆ ಅನ್ನೋ ಮಾತು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ.