Breaking News

ಸಹಕಾರ ಸಮ್ಮೇಳನ: ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಉದ್ಘಾಟನೆ

Spread the love

ಬೆಂಗಳೂರು: ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸಹಕಾರ ಸಮ್ಮೇಳನದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ “ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್” ಉದ್ಘಾಟಿಸಲಾಯಿತು.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ನಂದಿನಿ ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ಲಾಂಛನ ಬಿಡುಗಡೆ ಮಾಡಿದರು.

 

ಸಮಾರಂಭದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕರ್ನಾಕಟದಲ್ಲಿ ಸಹಕಾರಿ ರಂಗ ಮಹತ್ವದ ಪಾತ್ರ ವಹಿಸಿದೆ. ಸಹಕಾರ ಗ್ರಾಮೀಣ ಆರ್ಥಿಕ ಚಟುವಟಿಕೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಸರ್ಕಾರವೂ ಸಹಕಾರ ಕ್ಷೇತ್ರ ಬಲ ಪಡಿಸುವ ಕೆಲಸ ಮಾಡುತ್ತಿದೆ. ಈ ವರ್ಷ 33 ಲಕ್ಷ ರೈತರಿಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೃಷಿಯಿಂದ ಸಹಕಾರಿ ಇಲಾಖೆಯನ್ನು ಪ್ರತ್ಯೇಕ ಮಾಡಿದ್ದಾರೆ. ದೇಶದ ಎಲ್ಲ ಪ್ಯಾಕ್ಸ್ ಗಳು ಕಾಂಪ್ರೆಸ್ ಆಗಬೇಕೆಂದು ಕ್ರಮ ಕೈಗೊಂಡಿದ್ದಾರೆ ಎಂದರು.

ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಹಾಲು ಮಾರುವವರ ಶಕ್ತಿ ಏನು ಎಂದು ತೋರಿಸುತ್ತದೆ. ಹಾಲು ಉತ್ಪಾದಕರು ಪ್ರತಿ ದಿನ 20. ಸಾವಿರ ಕೋಟಿ ರೂ.ವ್ಯವಹಾರ ಮಾಡುತ್ತಾರೆ. ಅವರದ್ದೇ ಆದ ಬ್ಯಾಂಕ್ ಸ್ಥಾಪನೆಯಾದರೆ ಇದು ದೊಡ್ಡ ಶಕ್ತಿಯಾಗಿ ಬೆಳೆಯಲಿದೆ. ಈ ಬ್ಯಾಂಕ್ ಗೆ ರಾಜ್ಯ ಸರ್ಕಾರ 100 ಕೋಟಿ ರೂ. ಮೂಲ ಬಂಡವಾಳವಾಗಿ ನೀಡುತ್ತಿದೆ ಎಂದರು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ