Breaking News
Home / ರಾಜಕೀಯ / ಎಳೆನೀರು ಮಾರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ದೋಚಿ ಪರಾರಿ

ಎಳೆನೀರು ಮಾರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ದೋಚಿ ಪರಾರಿ

Spread the love

ಗಂಗಾವತಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಗೆ ಆಗಮಿಸುವ ಪ್ರವಾಸಿಗರಿಗೆ ಎಳೆನೀರು, ತೆಂಗಿನಕಾಯಿ ಮಾರಾಟ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ.

ಹನುಮನಹಳ್ಳಿ ಗ್ರಾಮದ ಖಾಜಾಬಿ ಹತ್ತಿರ ಬೈಕ್ ನಲ್ಲಿಆಗಮಿಸಿದ ಮೂವರು ತೆಂಗಿನ ಕಾಯಿ ಖರೀದಿಸುವ ನೆಪದಲ್ಲಿ ಮಹಿಳೆಯ ಕತ್ತಿನಲ್ಲಿದ್ದ 2ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.ಶುಕ್ರವಾರ ಅಮವಾಸ್ಯೆಯಾಗಿದ್ದರಿಂದ ಹೆಚ್ಚಿನ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ಶನಿವಾರ, ಮಂಗಳವಾರ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು ಹೆಚ್ಚು ಜನಸಂದಣಿ ಇರುತ್ತದೆ. ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದರೂ ವಿಶೇಷ ದಿನಗಳಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಭದ್ರತೆ ನೀಡುವಲ್ಲಿ ವಿಫಲವಾಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ