Breaking News

ರಾಜ್ಯ & ಕೇಂದ್ರ ರಾಜಕೀಯದಲ್ಲಿ ಬದಲಾವಣೆ ಇಲ್ಲ: ಭವಿಷ್ಯ ನುಡಿದ ಗೊಂಬೆಗಳು!

Spread the love

ಧಾರವಾಡ: ಈ ವರ್ಷ ರಾಜ್ಯ ಮತ್ತು ಕೇಂದ್ರ ರಾಜಕೀಯದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಮಣ್ಣಿನ ಗೊಂಬೆಗಳು ಭವಿಷ್ಯ(Doll Prediction) ನುಡಿದಿವೆ. ಧಾರವಾಡ ಜಿಲ್ಲೆಯ ಹನುಮನಕೊಪ್ಪ ಗ್ರಾಮದ ಗೊಂಬೆಗಳು ಪ್ರತಿವರ್ಷ ಯುಗಾದಿ ಹಬ್ಬದಂದು ಭವಿಷ್ಯ ನುಡಿಯುತ್ತವೆ.

ಅದೇ ರೀತಿ ಈಗ ರಾಜಕೀಯ ಭವಿಷ್ಯವನ್ನು ತಿಳಿಸಿವೆ.

ಹನುಮನಕೊಪ್ಪ(Hanumanakoppa)ದ ಮಣ್ಣಿನ ಗೊಂಬೆಗಳು ರಾಜಕೀಯ ಭವಿಷ್ಯವನ್ನು ನಿಖರವಾಗಿ‌ ಹೇಳುತ್ತವೆ. ಪ್ರತಿ‌ ಯುಗಾದಿಗೆ ಇಲ್ಲಿ ಗೊಂಬೆ ಭವಿಷ್ಯ ನಡೆಯುತ್ತದೆ. ಕಳೆದ ವರ್ಷ ಬೊಂಬೆಗಳು ಸಿಎಂ ಬದಲಾವಣೆ ಮುನ್ಸೂಚಣೆ ನೀಡಿದ್ದವು. ಅದರಂತೆ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಬಸವರಾಜ್ ಬೊಮ್ಮಾಯಿ(Basavaraj Bommai)ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆಯ ಮಾತುಗಳು ಕೇಳಿಬಂದಿದ್ದವು. ಆದರೆ ಈ ಸಲ ರಾಜ್ಯ ಮತ್ತು ಕೇಂದ್ರ ರಾಜಕೀಯದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲವೆಂದು ಗೊಂಬೆಗಳ ಭವಿಷ್ಯದಿಂದ ತಿಳಿದುಬಂದಿದೆ. ರಾಜಕೀಯ ಭವಿಷ್ಯ ನಿರ್ಧರಿಸುವ ಗೊಂಬೆಗಳಿಗೆ ಯಾವುದೇ ರೀತಿ ಧಕ್ಕೆಯಾಗಿಲ್ಲ. ಯುಗಾದಿ ಅಮವಾಸ್ಯೆ(Ugadi Amavasya) ರಾತ್ರಿ ಗ್ರಾಮಸ್ಥರು ಗೊಂಬೆ ಮಾಡಿಟ್ಟು ಬರುತ್ತಾರೆ. ಇಂದು ಬೆಳಗಿನ ಜಾವ ಗೊಂಬೆಗಳನ್ನು ನೋಡಿ ಭವಿಷ್ಯ ನಿರ್ಧಾರ ಮಾಡಲಾಗಿದೆ.

ಮಳೆ ಬೆಳೆ ಬಗ್ಗೆಯೂ ಗೊಂಬೆಗಳು ಭವಿಷ್ಯ(Doll Political Prediction) ನುಡಿದಿವೆ. ಈ ಬಾರಿ ಅನ್ನ ಆಹಾರಕ್ಕೆ ತೊಂದರೆ ಆಗುವುದಿಲ್ಲವಂತೆ. ಆದರೆ ಉಳುಮೆ ಮಾಡುವಾಗ ರೈತರಿಗೆ ಪೆಟ್ಟುಗಳು ಆಗುವ ಸಾಧ್ಯತೆ ಇದೆ. ರೈತರಿಗೆ ಜಮೀನಿನಲ್ಲಿ ಪೆಟ್ಟಾಗಬಹುದೆಂಬ ಭವಿಷ್ಯವನ್ನು ಗೊಂಬೆಗಳು ನುಡಿದಿವೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ