Breaking News

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

Spread the love

ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ. ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಡಿಕೆಶಿ ಸಿಎಂ ಆಗುವ ಕನಸು ಮಾತ್ರ ಕಾಣಬೇಕು

Spread the loveಮಂಡ್ಯ : ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ. ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಯಾರು ಬಿಟ್ಟು ಕೊಡ್ತಾರೆ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ