Breaking News

ಮಳೆ ಸುರಿದ ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ

Spread the love

ಅಥಣಿ(ಬೆಳಗಾವಿ): ತಾಲೂಕಿನಾದ್ಯಂತ ಇಂದು ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ತಾಲೂಕಿನ ಅಡಹಳ್ಳಿ, ಕೋಹಳ್ಳಿ, ಐಗಳಿ, ಕೋತನಟ್ಟಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಪರೀತ ಗಾಳಿ ಸಮೇತ ಮಳೆಯಾಗಿದ್ದು, ಒಣದ್ರಾಕ್ಷಿ ನೀರಿನಲ್ಲಿ ನೆನೆದು ಭಾರಿ ಹಾನಿ ಸಂಭವಿಸಿದೆ. ನವೆಂಬರ್- ಅಕ್ಟೋಬರ್ ತಿಂಗಳಿನಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಅಕಾಲಿಕ ಮಳೆಯಿಂದ ಭಾರಿ ನಷ್ಟ ಸಂಭವಿಸಿತ್ತು. ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಅದರಲ್ಲಿ ಅಳಿದು ಉಳಿದ ದ್ರಾಕ್ಷಿಯನ್ನು ರೈತರು ಒಣ ಹಾಕಿದ ಸಂದರ್ಭದಲ್ಲಿ ಹಠಾತ್ತನೆ ಮಳೆ ಬಂದ ಪರಿಣಾಮ ಒಣದ್ರಾಕ್ಷಿ ನೀರಿನಲ್ಲಿ ನೆನೆದು ರೈತರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನೇನು ಈ ವಾರದಲ್ಲಿ ಮಾರಾಟವಾಗಬೇಕಿದ್ದ ಒಣದ್ರಾಕ್ಷಿ ಮಳೆ ನೀರಿನಲ್ಲಿ ನೆನೆದ ಪರಿಣಾಮ, ರೈತರನ್ನು ಚಿಂತೆಗೀಡು ಮಾಡಿದೆ. ಕಳೆದ ಒಂದು ವರ್ಷದಿಂದ ಬೆಳೆದ ಬೆಳೆ ಕೊನೆ ಹಂತದಲ್ಲಿ ಈ ರೀತಿ ನಷ್ಟ ಉಂಟಾಗಿರುವುದು, ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ