ಬೆಂಗಳೂರು: ಬೇಸಿಗೆ ಸಂದರ್ಭದಲ್ಲಿ ಉತ್ತರ ಕರ್ನಾಟಕದಲ್ಲಿ ಬಿಸಿಲ ಝಳದ ಹೆಚ್ಚಳದ ಕಾರಣ, ಕಚೇರಿ ಸಮಯದಲ್ಲಿ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೇ ಈ ಬಾರಿ ಸುಡು ಬಿಸಿಲಿನಲ್ಲಿಯೂ ರೈತರ ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ), ಕಚೇರಿ ಸಮಯದಲ್ಲಿ ಬದಲಾವಣೆ ಮಾಡದೇ, ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪತ್ರ ಬರೆದಿದ್ದು, ಬೇಸಿಗೆಯ ತೀವ್ರತೆಯ ಕಾರಣ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆ, ಕಲಬುರ್ಗಿ ವಿಭಾಗದ ಜಿಲ್ಲೆಗಳ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾಯಿಸುವಂತೆ ಕೋರಿರೋದು ಸರಿಯಷ್ಟೇ.
ಆದ್ರೇ.. ದೆಹಲಿಯಲ್ಲಿ ಕಲಬುರ್ಗಿಗಿಂತ ಹೆಚ್ಚಿನ ತಾಪಮಾನವಿದ್ದರೂ ಅಲ್ಲಿಯ ಕಚೇರಿಗಳ ಕೆಲಸಜ ಸಮಯವನ್ನು ಬದಲಾವಣೆ ಮಾಡಿರುವುದಿಲ್ಲ. ಆದ್ದರಿಂದ ಇನ್ಮುಂದೆಯೂ ಸಹ ಬೆಳಗಾವಿ ವಿಭಾಗ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರತೆಯ ಕಾರಣ ಕಚೇರಿ ಕೆಲಸದ ಸಮಯವನ್ನು ಬದಲಾವಣೆ ಮಾಡುವ ಅಗತ್ಯವಿಲ್ಲ ಎಂಬುದಾಗಿ ತಿಳಿಸಿದ್ದಾರೆ.