Breaking News

ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ

Spread the love

ತುಮಕೂರು: ಮನೆಯವರ ವಿರೋಧದ ನಡುವೆಯೂ ದೇವಸ್ಥಾನದಲ್ಲಿ ಪ್ರೇಯಸಿಯ ಕುತ್ತಿಗೆಗೆ ತಾಳಿ ಕಟ್ಟಿದ ಯುವಕ, ಜೀವನಪೂರ್ತಿ ನಿನ್ನೊಂದಿಗೇ ಇರುವೆ ಎಂದೂ ಮಾತೂ ಕೊಟ್ಟಿದ್ದ. ಇದಾದ ಮೂರು ದಿನಕ್ಕೆ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ಖುಷಿಯಾಗೇ ಮದುವೆ ನೋಂದಣಿ ಕೂಡ ಮಾಡಿಸಿಕೊಂಡ ಈ ಜೋಡಿ 6 ದಿನ ಸಂಸಾರವನ್ನೂ ನಡೆಸಿತ್ತು.

ಎಲ್ಲವೂ ಸುಸೂತ್ರವಾಗಿ ನೆರವೇರಿತು, ಪ್ರೀತಿಸಿದ ಹುಡುಗ ಜೀವನ ಪೂರ್ತಿ ಸಂಗಾತಿಯಾಗಿ ಇರ್ತಾನೆ… ಇನ್ನು ತಮ್ಮದೇ ಆದ ಬದುಕು ಕಟ್ಟಿಕೊಂಡು ನೆಲೆಯೂರಬೇಕು ಅಂದುಕೊಳ್ಳುವಷ್ಟರಲ್ಲಿ ಯುವತಿ ಬಾಳಲ್ಲಿ ನಡೆಯಬಾರದ್ದು ನಡೆದು ಹೋಗಿದೆ! ಪ್ರೀತಿಸಿ ಮದ್ವೆಯಾದ ಯುವತಿ ಬೀದಿಪಾಲಾಗಿದ್ದಾಳೆ.

ಏನಿದು ಪ್ರಕರಣ?: ತಿಪಟೂರು ತಾಲೂಕಿನ ಪರವಗೊಂಡನಹಳ್ಳಿ‌ ಗ್ರಾಮದಲ್ಲಿ ನಿಖಿಲ್​ ಮತ್ತು ಹಟ್ನ ಗ್ರಾಮದ ಚೈತ್ರಾ ಇಬ್ಬರೂ ತುರುವೇಕೆರೆಯ ಮೊಬೈಲ್ ಶಾಪ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪರಿಚಯ ತದನಂತರ ಪ್ರೀತಿಗೆ ತಿರುಗಿತ್ತು. ಇವರಿಬ್ಬರ ಜಾತಿ ಬೇರೆ ಬೇರೆ ಎಂದು ಪಾಲಕರು ಮದುವೆಗೆ ಒಪ್ಪಿಗೆ ಕೊಟ್ಟಿರಲಿಲ್ಲವಂತೆ. ಕೊನೆಗೆ ಇವರಿಬ್ಬರೂ ಮನೆಯವರ ವಿರೋಧದ ನಡುವೆಯೂ ಮನೆಯಿಂದ ಹೊರ ಬಂದು ಕಳೆದ ಫೆಬ್ರವರಿ 4ರಂದು ದೇವಸ್ಥಾನದಲ್ಲಿ ಮದುವೆ ಆಗಿದ್ದರು. ಫೆಬ್ರವರಿ 7ರಂದು ರಿಜಿಸ್ಟ್ರಾರ್ ಮ್ಯಾರೇಜ್ ಕೂಡ ಆಗಿದ್ದರು. ತಿಪಟೂರು ತಾಲೂಕು ಕಿಬ್ಬನಳ್ಳಿ ಬಳಿಯ ಇಂಡಿಸ್ಕೆರೆ ಗ್ರಾಮದಲ್ಲಿ ಮನೆ ಮಾಡಿದ್ದ ಪ್ರೇಮಿಗಳಿಬ್ಬರೂ 6 ದಿನ ಒಟ್ಟಿಗೆ ವಾಸವಿದ್ದರು. ಮದ್ವೆಯಾದ 7ನೇ ದಿನಕ್ಕೆ ಯುವಕ ಎಸ್ಕೇಪ್​ ಆಗಿದ್ದಾನೆ!


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ