ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರ ನಿತ್ಯ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡುವುದರ ಮೂಲಕ ಜನರಿಗೆ ಕೊಡಲಿಪೆಟ್ಟು ಕೊಡುತ್ತಿದೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ನಗರದಲ್ಲಿ 111 ರೂ. ಪೆಟ್ರೋಲ್ ದರ ಇದ್ದು, ಸಾರ್ವಜನಿಕರಿಗೆ ಸಾಂಕೇತಿಕವಾಗಿ ಪೆಟ್ರೋಲ್ ಅನ್ನು ಉಚಿತವಾಗಿ ವಿತರಿಸುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು.
ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೂ ಸಹ ಏರಿಕೆಯಾಗಿದೆ. ಚುಣಾವಣೆಗೋಸ್ಕರ ಸೀಮಿತವಾಗಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾರ್ವಜನಿಕರ ಹಿತವನ್ನು ಮರೆತು ನಿತ್ಯ ದರ ಏರಿಕೆ ಮಾಡುವುದರ ಮೂಲಕ ಸಾರ್ವಜನಿಕರ ಜೀವನಕ್ಕೆ ಅಪಾಯವನ್ನು ತಂದಿದೆ ಎಂದು ಕಾಂಗ್ರೆಸ್ ಮುಖಂಡ ಎಸ್. ಮನೋಹರ್ ಆಕ್ರೋಶ ವ್ಯಕ್ತಪಡಿಸಿದರು.