Breaking News

ಪೆಟ್ರೋಲ್​ ಬೆಲೆ ಏರಿಕೆಯನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ​ ಪ್ರತಿಭಟನೆ

Spread the love

ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರ ನಿತ್ಯ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡುವುದರ ಮೂಲಕ ಜನರಿಗೆ ಕೊಡಲಿಪೆಟ್ಟು ಕೊಡುತ್ತಿದೆ ಎಂದು ಕಾಂಗ್ರೆಸ್​ ಪ್ರತಿಭಟನೆ ನಡೆಸಿದೆ. ನಗರದಲ್ಲಿ 111 ರೂ. ಪೆಟ್ರೋಲ್ ದರ ಇದ್ದು, ಸಾರ್ವಜನಿಕರಿಗೆ ಸಾಂಕೇತಿಕವಾಗಿ ಪೆಟ್ರೋಲ್ ಅನ್ನು ಉಚಿತವಾಗಿ ವಿತರಿಸುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು.

ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೂ ಸಹ ಏರಿಕೆಯಾಗಿದೆ. ಚುಣಾವಣೆಗೋಸ್ಕರ ಸೀಮಿತವಾಗಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾರ್ವಜನಿಕರ ಹಿತವನ್ನು ಮರೆತು ನಿತ್ಯ ದರ ಏರಿಕೆ ಮಾಡುವುದರ ಮೂಲಕ ಸಾರ್ವಜನಿಕರ ಜೀವನಕ್ಕೆ ಅಪಾಯವನ್ನು ತಂದಿದೆ ಎಂದು ಕಾಂಗ್ರೆಸ್ ಮುಖಂಡ ಎಸ್. ಮನೋಹರ್ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ, ಕನಿಷ್ಠ ವೇತನ; ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ

Spread the love ಬೆಂಗಳೂರು: ರಾಜ್ಯಾದ್ಯಂತ ಸುಮಾರು 8 ಲಕ್ಷ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಮಹತ್ವದ ಕಾನೂನನ್ನು ಜಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ